ಸುದ್ದಿಗಳು

ಮಂಗಳೂರು ನಗರಕ್ಕೆ ಜಲಕ್ಷಾಮ : ತುಂಬೆ ಡ್ಯಾಂನಲ್ಲಿ ಉಳಿದಿದೆ ಸ್ವಲ್ಪವೇ ನೀರು : ಕೇವಲ 20 ದಿನಗಳಿಗೆ ಆಗುವಷ್ಟು ಮಾತ್ರ ನೀರಿದೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೇಸಿಗೆಯ ಬೇಗೆಗೆ ಜನ ತತ್ತರಿಸುತ್ತಿದ್ದಾರೆ. ಇದರ ನಡುವೆ ರಾಜ್ಯದ ಹಲವೆಡೆ ನೀರಿಗೆ ಹಾಹಾಕಾರ ಎದುರಾಗಿದೆ. ಮಂಗಳೂರು ನಗರ ಹಾಗೂ ಸುತ್ತಾಮುತ್ತಲಿನ ಪ್ರದೇಶಗಳಿಗೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ ನಿರಂತರವಾಗಿ ನೀರು ಕಡಿಮೆಯಾಗುತ್ತಿದೆ. ತುಂಬೆ ಡ್ಯಾಂನಲ್ಲಿ ಕೇವಲ 20 ದಿನಕ್ಕೆ ಮಂಗಳೂರು ನಗರಕ್ಕೆ ಪೂರೈಕೆ ಮಾಡುವಷ್ಟು ನೀರಿನ ಸಂಗ್ರಹವಿದೆ. ಸದ್ಯ ನೀರು ಪಂಪಿಂಗ್‌ ಮಾಡದೇ ಇದ್ದರೂ ಕೂಡ ಪ್ರತಿದಿನ 4 ಸೆಂಟಿಮೀಟರ್‌ನಷ್ಟು ನೀರಿನ ಪ್ರಮಾಣ ಇಳಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Advertisement
Advertisement

ತುಂಬೆಯಿಂದ ಪ್ರತಿದಿನ ಪಂಪಿಂಗ್‌ ಮಾಡುತ್ತಿರುವ ವೇಳೆ 8 ಸಂಟಿಮೀಟರ್‌ನಷ್ಟು ನೀರು ಇಳಿಕೆಯಾಗುತ್ತಿತ್ತು. ಆದರೆ ಈಗ ಪಂಪಿಂಗ್‌ ಮಾಡದೇ ಇದ್ದರೂ 4 ಸೆಂ.ಮೀ ಇಳಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಹೊಸ್ತಿಲ್ಲಲ್ಲೇ ನೀರಿನ ಹಾಹಾಕಾರ ಏಳಲಿದೆ. ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳ ಪ್ರಕಾರ, ಹರೇಕಳ ಬ್ಯಾರೇಜ್‌ನ ಹಿನ್ನೀರಿನಿಂದ ನೀರು ಹರಿಸುವುದರಿಂದ ತುಂಬೆ ಅಣೆಕಟ್ಟಿನ ನೀರಿನ ಮಟ್ಟವು ದಿನಕ್ಕೆ 8 ಸೆಂಟಿಮೀಟರ್‌ನಿಂದ 4 ಸೆಂಟಿಮೀಟರ್‌ಗೆ ಇಳಿಕೆಯಾಗಿದೆ, ಇದು ಇನ್ನೂ ಕಾರ್ಯಾರಂಭ ಮಾಡಿಲ್ಲ. ಎಂಸಿಸಿಯು ತುಂಬೆ ಅಣೆಕಟ್ಟಿನ ಕೆಳಭಾಗದಲ್ಲಿರುವ ಹರೇಕಳ ಬ್ಯಾರೇಜ್‌ನ ಹಿನ್ನೀರಿನಿಂದ ಒಂದು ವಾರದ ಹಿಂದೆ ಮತ್ತೆ ನೀರನ್ನು ಪಂಪ್ ಮಾಡಲು ಪ್ರಾರಂಭಿಸಿದೆ.

ಈ ಹಿಂದೆ ತುಂಬೆ ಅಣೆಕಟ್ಟಿನ ನೀರಿನ ಮಟ್ಟ ದಿನಕ್ಕೆ ಸರಾಸರಿ 8 ಸೆಂಟಿಮೀಟರ್‌ಗಳಷ್ಟು ಇಳಿಕೆಯಾಗುತ್ತಿತ್ತು. ಆದಾಗ್ಯೂ, ಮಂಗಳೂರು ಪಾಲಿಕೆ, ಹರೇಕಳ ಬ್ಯಾರೇಜ್‌ನಿಂದ ಹಿನ್ನೀರನ್ನು ಪಂಪ್ ಮಾಡಲು ಪ್ರಾರಂಭಿಸಿದ ನಂತರ, ತುಂಬೆ ಅಣೆಕಟ್ಟು ದಿನಕ್ಕೆ 4cm ವರೆಗೆ ಕಡಿಮೆಯಾಗಿದೆ. ಕನಿಷ್ಠ ಮುಂದಿನ 20 ದಿನಗಳವರೆಗೆ ನೀರಿನ ಸಮಸ್ಯೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತುಂಬೆ ಡ್ಯಾಂನಲ್ಲಿ ಏಪ್ರಿಲ್ 30 ರಂದು ನೀರಿನ ಮಟ್ಟ 4.48 ಮೀಟರ್‌ಗೆ ಇಳಿಕೆಯಾಗಿದ್ದು, ಸುಮಾರು 2.5ಮೀಟರ್‌ವರೆಗೆ ಮಂಗಳೂರು ನಗರಕ್ಕೆ ಪಂಪಿಂಗ್‌ ಮಾಡಬಹುದಾಗಿದೆ. ಆದುದರಿಂದ ಇನ್ನು 2.5ಮೀಟರ್‌ ಮಾತ್ರ ನೀರು ಬಳಕೆಗೆ ಯೋಗ್ಯವಾಗಿದೆ.

ತುಂಬೆಯಲ್ಲಿರುವ ಪಂಪಿಂಗ್ ಸ್ಟೇಷನ್‌ನಲ್ಲಿ ಎಂಸಿಸಿ ನಿರ್ವಹಣಾ ಕಾರ್ಯವನ್ನು ತೆಗೆದುಕೊಳ್ಳುತ್ತಿದ್ದ ಕಾರಣ ಏಪ್ರಿಲ್ 27 ರಂದು ಬೆಳಿಗ್ಗೆ 6 ರಿಂದ ಏಪ್ರಿಲ್ 29 ರ ಬೆಳಿಗ್ಗೆ 6 ರ ನಡುವೆ ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಶನಿವಾರ ನಗರಕ್ಕೆ ನೀರನ್ನು ಪಂಪ್ ಮಾಡುವುದನ್ನು ಪುನರಾರಂಭಿಸಿಲಾಗಿದೆ. ಮತ್ತು ಎತ್ತರದ ಪ್ರದೇಶಗಳಿಗೆ ನೀರು ಬರಲು ಒಂದು ಅಥವಾ ಎರಡು ದಿನಗಳು ಬೇಕಾಗಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

6 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

6 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

7 hours ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

7 hours ago

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !

ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…

7 hours ago

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago