ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡು ಬರದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಬೇಕು. ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷವಾಗಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ ಎಂದು ಹೇಳಿದರು.
ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಕಾರಣ ಕಲ್ಯಾಣ ಕರ್ನಾಟಕ ಭಾಗದಲ್ಲಿ 30 ಲಕ್ಷ ಹೆಕ್ಟೇರ್ಗಿಂತಲೂ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿಲ್ಲ ಎಂದು ಆರೋಪಿಸಿದ ಅವರು, ತೊಗರಿ, ಉದ್ದು, ಸೂರ್ಯಕಾಂತಿ ಸೇರಿದಂತೆ ಹಲವು ಪ್ರಮುಖ ಬೆಳೆಗಳು ತೀವ್ರವಾಗಿ ಹಾನಿಗೊಳಗಾಗುವ ಸಾಧ್ಯತೆ ಎದುರಾಗಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ರೈತರು ಈಗಾಗಲೇ ಬಿತ್ತನೆಗಾಗಿ ಸಾಕಷ್ಟು ವೆಚ್ಚ ಮಾಡಿದ್ದು, ಮಳೆಯ ಕೊರತೆಯಿಂದ ಬೆಳೆ ಬೆಳವಣಿಗೆ ಕುಂಠಿತವಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣ ರೈತರ ಪರಿಸ್ಥಿತಿಯನ್ನು ಪರಿಶೀಲಿಸಿ ಪರಿಹಾರ ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.
BJP Karnataka President B.Y. Vijayendra has urged the state government to provide ₹50,000 per acre as compensation to farmers due to drought-like conditions caused by a weak monsoon. He claimed that over 30 lakh hectares in the Kalyana Karnataka region remain unsown due to rainfall deficit and called for immediate relief measures.

