ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

September 1, 2026
3:16 PM
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ರೈತರ ಜಮೀನುಗಳಲ್ಲೇ ಪರಿಶೀಲಿಸಿದರು. ಸೂರ್ಯಕಾಂತಿ, ಮೆಕ್ಕೆಜೋಳ, ಹತ್ತಿ, ಶೇಂಗಾ ಮತ್ತು ಮೆಣಸಿನಕಾಯಿ ಬೆಳೆಗಳ ಸ್ಥಿತಿಯನ್ನು ಅವರು ವೀಕ್ಷಿಸಿದರು.

ರಾಜ್ಯದ ವಿವಿಧೆಡೆ ಎದುರಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಇದರ ಭಾಗವಾಗಿ ಗದಗ ಜಿಲ್ಲೆಯ ಗದಗ ಮತ್ತು ಮುಂಡರಗಿ ತಾಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ರೈತರ ಜಮೀನುಗಳಲ್ಲಿ ಬೆಳೆಗಳ ಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು.

ಮುಂಡರಗಿ ತಾಲೂಕಿನ ಕದಾಂಪುರ ಗ್ರಾಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ, ರೈತ ಶಂಕರಪ್ಪ ಗಾವರವಾಡ ಅವರ ಜಮೀನಿನಲ್ಲಿ ಬೆಳೆದಿರುವ ಸೂರ್ಯಕಾಂತಿ ಬೆಳೆಯನ್ನು ವೀಕ್ಷಿಸಿದರು. ಇದೇ ವೇಳೆ ಸುನೀತಾ ಈರಪ್ಪ ಪೂಜಾರ ಅವರ ಜಮೀನಿನಲ್ಲಿನ ಮೆಕ್ಕೆಜೋಳ ಹಾಗೂ ಕಲ್ಲಪ್ಪ ಕಾಡಾಪ್ಪಗೋಳ ಅವರ ಜಮೀನಿನಲ್ಲಿನ ಹತ್ತಿ ಬೆಳೆಗಳ ಸ್ಥಿತಿಯನ್ನು ಪರಿಶೀಲಿಸಿದರು.

ಶೇಂಗಾ, ಹತ್ತಿ, ಮೆಣಸಿನಕಾಯಿ ಬೆಳೆಗಳ ಪರಿಶೀಲನೆ : ಬಳಿಕ ಗದಗ ತಾಲೂಕಿನ ಕುರ್ತಕೋಟಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ರೈತ ಶ್ರೀನಾಥ್ ಮಾರ್ತಾಂಡಗೌಡ ಅವರ ಜಮೀನಿನಲ್ಲಿನ ಶೇಂಗಾ, ಹತ್ತಿ ಮತ್ತು ಮೆಣಸಿನಕಾಯಿ ಬೆಳೆಗಳ ಸ್ಥಿತಿಯನ್ನು ವೀಕ್ಷಿಸಿದರು.

ನಂತರ ಹುಲಕೋಟಿ ಗ್ರಾಮದ ರೈತ ಹನುಮಂತಪ್ಪ ಸೋಗಿನ ಅವರ ಜಮೀನಿಗೆ ಭೇಟಿ ನೀಡಿ, ಮೆಕ್ಕೆಜೋಳ ಬೆಳೆಗೆ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿದರು.

ರೈತರ ಜಮೀನಿನಲ್ಲೇ ಬರ ಪರಿಸ್ಥಿತಿ ಅವಲೋಕನ :  ಸೂರ್ಯಕಾಂತಿ, ಮೆಕ್ಕೆಜೋಳ, ಹತ್ತಿ, ಶೇಂಗಾ ಹಾಗೂ ಮೆಣಸಿನಕಾಯಿ ಸೇರಿದಂತೆ ಪ್ರಮುಖ ಬೆಳೆಗಳ ಸ್ಥಿತಿಯನ್ನು ಮುಖ್ಯಮಂತ್ರಿ ನೇರವಾಗಿ ಪರಿಶೀಲಿಸಿರುವುದು, ಬರ ಪರಿಸ್ಥಿತಿಯ ವಾಸ್ತವ ಚಿತ್ರಣವನ್ನು ಸ್ಥಳದಲ್ಲೇ ಅರಿಯುವ ಪ್ರಯತ್ನವಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬರ ಮತ್ತು ಬೆಳೆ ಹಾನಿಯ ಪರಿಸ್ಥಿತಿಯನ್ನು ಪರಿಶೀಲಿಸುವ ಪ್ರವಾಸದ ವೇಳೆ ರೈತರ ಜಮೀನುಗಳಿಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ, ಬೆಳೆಗಳ ಸ್ಥಿತಿ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸ್ಥಳೀಯ ಮಟ್ಟದಲ್ಲಿ ಮಾಹಿತಿ ಪಡೆಯುತ್ತಿದ್ದಾರೆ.

Chief Minister D.K. Shivakumar is touring different districts of Karnataka to assess drought conditions and crop damage. In Gadag district, he visited farms in Gadag and Mundargi taluks and inspected sunflower, maize, cotton, groundnut and chilli crops affected by the prevailing conditions.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?
September 1, 2026
7:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
August 31, 2026
2:46 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror