ಚುನಾವಣೆ ಮುಗಿಯುವವರೆಗೂ ಲಿಂಗಾಯತ ದಾಳ ಬಳಸಿ: ಶಾ ತಾಕೀತು

April 22, 2023
8:48 AM

ಚುನಾವಣೆ ಹೊತ್ತಲ್ಲಿ ರಾಜಕಾರಣಿಗಳಿಗೆ ಹೊಸ ಅಸ್ತ್ರ ಸಿಕ್ಕಿದೆ. ಅದುವೇ ಲಿಂಗಾಯತ ಸಿಎಂ ಅಸ್ತ್ರ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಬಿಜೆಪಿ ವಿರುದ್ಧ ನೇರಾನೇರ ಸಮರ ನಡೆಯುತ್ತಿದೆ.

ಚುನಾವಣೆ ಸಮಯದದಲ್ಲಿ ಇದು ಬಿಜೆಪಿಗೆ ಟೆನ್ಷನ್ ಹೆಚ್ಚಿಸಿದ್ದು ಲಿಂಗಾಯತರ ಕಡೆಗಣನೆ ಆರೋಪದಿಂದ ಚುನಾವಣೆ ಹೊಡೆತದ ಆತಂಕ ಎದುರಾಗಿದೆ. ಈ ಲಿಂಗಾಯತ ಸಿಎಂ ಟೆನ್ಷನ್ ವಿಚಾರಕ್ಕೆ ಅಮಿತ್ ಶಾ ತಮ್ಮದೇ ಆದ ಸೂತ್ರವೊಂದನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ರಾಜ್ಯ ನಾಯಕರ ಜೊತೆ ನಡೆಸಿದ ಸಭೆಯಲ್ಲಿ ಲಿಂಗಾಯತ ಕಡೆಗಣನೆ ಅಸ್ತ್ರ ಎದುರಿಸಲು ರಾಜ್ಯ ನಾಯಕರಿಗೆ ಅಮಿತ್ ಶಾ ತಂತ್ರವನ್ನು ರವಾನಿಸಿದ್ದಾರೆ. ಈ ಲಿಂಗಾಯತ ದಾಳವನ್ನು ಚುನಾವಣೆ ಮುಗಿಯುವವರೆಗೂ ಬಳಕೆ ಮಾಡುವಂತೆ ತಾಕೀತು ಮಾಡಿದ್ದಾರೆ.

ಶಾ ತಂತ್ರಗಾರಿಕೆ:
ಲಿಂಗಾಯತ ಸಿಎಂ ದಾಳ ಕಡೆಯವರೆಗೂ ಇರಿಸಿಕೊಳ್ಳಿ. ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‍ಗಿಂತಲೂ ಬಿಜೆಪಿಯ ಕೊಡುಗೆಯೇ ಹೆಚ್ಚಿದ್ದು, ಕಾಂಗ್ರೆಸ್ ಕಣ್ಣು ಒರೆಸುವ ತಂತ್ರಗಳಿಂದ ಸಮಯ ಸಾಧಕ ಆಟವಾಡುತ್ತಿದೆ.

ಈವರೆಗೆ ಇಬ್ಬರು ಲಿಂಗಾಯತ ಸಮುದಾಯದವರಿಗೆ ಸಿಎಂ ಸ್ಥಾನ ನೀಡಿದ್ದು ಮಾತ್ರವಲ್ಲದೇ ಅತೀ ಹೆಚ್ಚು ಟಿಕೆಟ್ ನೀಡಿ ಅತೀ ಹೆಚ್ಚು ಶಾಸಕರನ್ನು ಮಂತ್ರಿಗಳನ್ನಾಗಿ ಮಾಡಿದೆ.

ಬಿಜೆಪಿ ಲಿಂಗಾಯತ ನಾಯಕರಿಗೆ ಸೂಕ್ತ ಸ್ಥಾನಮಾನ, ಗೌರವ, ಪದವಿ ಅವಕಾಶ ಕೊಟ್ಟಿದ್ದರೆ ಕಾಂಗ್ರೆಸ್ ಒಬ್ಬರಿಗೂ ಸಿಎಂ ಹುದ್ದೆ ಕೊಟ್ಟಿಲ್ಲ. ಸಿಎಂ ಆಗಿದ್ದ ವಿರೇಂದ್ರ ಪಾಟೀಲರನ್ನು ಕಾಂಗ್ರೆಸ್ ಹೀನಾಯವಾಗಿ ನಡೆಸಿಕೊಂಡು ಕೇವಲ ಒಂಭತ್ತೇ ತಿಂಗಳಿಗೆ ಸಿಎಂ ಹುದ್ದೆ ಕಿತ್ತುಕೊಂಡು ಅಪಮಾನ ಮಾಡಿತ್ತು.

ಲಕ್ಷ್ಮಣ ಸವದಿ ಚುನಾವಣೆಯಲ್ಲಿ ಸೋತಿದ್ದರೂ ಪರಿಷತ್‌ಗೆ ಆಯ್ಕೆ ಮಾಡಿ ಡಿಸಿಎಂ ಮಾಡಲಾಗಿತ್ತು. ಜಗದೀಶ್ ಶೆಟ್ಟರ್‌ ಅವರಿಗೆ ಎಲ್ಲ ಪದವಿ ನೀಡಿ ಸಿಎಂ ಹುದ್ದೆಯನ್ನು ನೀಡಿ ಗೌರವ ನೀಡಲಾಗಿತ್ತು. ಪಕ್ಷದಲ್ಲಿ ಎಲ್ಲ ಸ್ಥಾನಮಾನ ಅನುಭವಿಸಿದವರು ಈಗ ಪಕ್ಷದ್ರೋಹ ಮಾಡಿ ಹೋಗಿದ್ದಾರೆ. ಈ ವಿಚಾರವನ್ನು ಮನವರಿಕೆ ಮಾಡಿ ಜಾಗೃತಿ ಮೂಡಿಸಿ ಮತದಾರರ ಗೊಂದಲವನ್ನು ತಪ್ಪಿಸಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror