Advertisement
ಸುದ್ದಿಗಳು

ಚುನಾವಣೆ ಮುಗಿಯುವವರೆಗೂ ಲಿಂಗಾಯತ ದಾಳ ಬಳಸಿ: ಶಾ ತಾಕೀತು

Share

ಚುನಾವಣೆ ಹೊತ್ತಲ್ಲಿ ರಾಜಕಾರಣಿಗಳಿಗೆ ಹೊಸ ಅಸ್ತ್ರ ಸಿಕ್ಕಿದೆ. ಅದುವೇ ಲಿಂಗಾಯತ ಸಿಎಂ ಅಸ್ತ್ರ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಬಿಜೆಪಿ ವಿರುದ್ಧ ನೇರಾನೇರ ಸಮರ ನಡೆಯುತ್ತಿದೆ.

Advertisement
Advertisement
Advertisement
Advertisement

ಚುನಾವಣೆ ಸಮಯದದಲ್ಲಿ ಇದು ಬಿಜೆಪಿಗೆ ಟೆನ್ಷನ್ ಹೆಚ್ಚಿಸಿದ್ದು ಲಿಂಗಾಯತರ ಕಡೆಗಣನೆ ಆರೋಪದಿಂದ ಚುನಾವಣೆ ಹೊಡೆತದ ಆತಂಕ ಎದುರಾಗಿದೆ. ಈ ಲಿಂಗಾಯತ ಸಿಎಂ ಟೆನ್ಷನ್ ವಿಚಾರಕ್ಕೆ ಅಮಿತ್ ಶಾ ತಮ್ಮದೇ ಆದ ಸೂತ್ರವೊಂದನ್ನು ನೀಡಿದ್ದಾರೆ.

Advertisement

ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ರಾಜ್ಯ ನಾಯಕರ ಜೊತೆ ನಡೆಸಿದ ಸಭೆಯಲ್ಲಿ ಲಿಂಗಾಯತ ಕಡೆಗಣನೆ ಅಸ್ತ್ರ ಎದುರಿಸಲು ರಾಜ್ಯ ನಾಯಕರಿಗೆ ಅಮಿತ್ ಶಾ ತಂತ್ರವನ್ನು ರವಾನಿಸಿದ್ದಾರೆ. ಈ ಲಿಂಗಾಯತ ದಾಳವನ್ನು ಚುನಾವಣೆ ಮುಗಿಯುವವರೆಗೂ ಬಳಕೆ ಮಾಡುವಂತೆ ತಾಕೀತು ಮಾಡಿದ್ದಾರೆ.

ಶಾ ತಂತ್ರಗಾರಿಕೆ:
ಲಿಂಗಾಯತ ಸಿಎಂ ದಾಳ ಕಡೆಯವರೆಗೂ ಇರಿಸಿಕೊಳ್ಳಿ. ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‍ಗಿಂತಲೂ ಬಿಜೆಪಿಯ ಕೊಡುಗೆಯೇ ಹೆಚ್ಚಿದ್ದು, ಕಾಂಗ್ರೆಸ್ ಕಣ್ಣು ಒರೆಸುವ ತಂತ್ರಗಳಿಂದ ಸಮಯ ಸಾಧಕ ಆಟವಾಡುತ್ತಿದೆ.

Advertisement

ಈವರೆಗೆ ಇಬ್ಬರು ಲಿಂಗಾಯತ ಸಮುದಾಯದವರಿಗೆ ಸಿಎಂ ಸ್ಥಾನ ನೀಡಿದ್ದು ಮಾತ್ರವಲ್ಲದೇ ಅತೀ ಹೆಚ್ಚು ಟಿಕೆಟ್ ನೀಡಿ ಅತೀ ಹೆಚ್ಚು ಶಾಸಕರನ್ನು ಮಂತ್ರಿಗಳನ್ನಾಗಿ ಮಾಡಿದೆ.

ಬಿಜೆಪಿ ಲಿಂಗಾಯತ ನಾಯಕರಿಗೆ ಸೂಕ್ತ ಸ್ಥಾನಮಾನ, ಗೌರವ, ಪದವಿ ಅವಕಾಶ ಕೊಟ್ಟಿದ್ದರೆ ಕಾಂಗ್ರೆಸ್ ಒಬ್ಬರಿಗೂ ಸಿಎಂ ಹುದ್ದೆ ಕೊಟ್ಟಿಲ್ಲ. ಸಿಎಂ ಆಗಿದ್ದ ವಿರೇಂದ್ರ ಪಾಟೀಲರನ್ನು ಕಾಂಗ್ರೆಸ್ ಹೀನಾಯವಾಗಿ ನಡೆಸಿಕೊಂಡು ಕೇವಲ ಒಂಭತ್ತೇ ತಿಂಗಳಿಗೆ ಸಿಎಂ ಹುದ್ದೆ ಕಿತ್ತುಕೊಂಡು ಅಪಮಾನ ಮಾಡಿತ್ತು.

Advertisement

ಲಕ್ಷ್ಮಣ ಸವದಿ ಚುನಾವಣೆಯಲ್ಲಿ ಸೋತಿದ್ದರೂ ಪರಿಷತ್‌ಗೆ ಆಯ್ಕೆ ಮಾಡಿ ಡಿಸಿಎಂ ಮಾಡಲಾಗಿತ್ತು. ಜಗದೀಶ್ ಶೆಟ್ಟರ್‌ ಅವರಿಗೆ ಎಲ್ಲ ಪದವಿ ನೀಡಿ ಸಿಎಂ ಹುದ್ದೆಯನ್ನು ನೀಡಿ ಗೌರವ ನೀಡಲಾಗಿತ್ತು. ಪಕ್ಷದಲ್ಲಿ ಎಲ್ಲ ಸ್ಥಾನಮಾನ ಅನುಭವಿಸಿದವರು ಈಗ ಪಕ್ಷದ್ರೋಹ ಮಾಡಿ ಹೋಗಿದ್ದಾರೆ. ಈ ವಿಚಾರವನ್ನು ಮನವರಿಕೆ ಮಾಡಿ ಜಾಗೃತಿ ಮೂಡಿಸಿ ಮತದಾರರ ಗೊಂದಲವನ್ನು ತಪ್ಪಿಸಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

4 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago