Advertisement
ಸುದ್ದಿಗಳು

ಚುನಾವಣೆ ಮುಗಿಯುವವರೆಗೂ ಲಿಂಗಾಯತ ದಾಳ ಬಳಸಿ: ಶಾ ತಾಕೀತು

Share

ಚುನಾವಣೆ ಹೊತ್ತಲ್ಲಿ ರಾಜಕಾರಣಿಗಳಿಗೆ ಹೊಸ ಅಸ್ತ್ರ ಸಿಕ್ಕಿದೆ. ಅದುವೇ ಲಿಂಗಾಯತ ಸಿಎಂ ಅಸ್ತ್ರ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಬಿಜೆಪಿ ವಿರುದ್ಧ ನೇರಾನೇರ ಸಮರ ನಡೆಯುತ್ತಿದೆ.

ಚುನಾವಣೆ ಸಮಯದದಲ್ಲಿ ಇದು ಬಿಜೆಪಿಗೆ ಟೆನ್ಷನ್ ಹೆಚ್ಚಿಸಿದ್ದು ಲಿಂಗಾಯತರ ಕಡೆಗಣನೆ ಆರೋಪದಿಂದ ಚುನಾವಣೆ ಹೊಡೆತದ ಆತಂಕ ಎದುರಾಗಿದೆ. ಈ ಲಿಂಗಾಯತ ಸಿಎಂ ಟೆನ್ಷನ್ ವಿಚಾರಕ್ಕೆ ಅಮಿತ್ ಶಾ ತಮ್ಮದೇ ಆದ ಸೂತ್ರವೊಂದನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ರಾಜ್ಯ ನಾಯಕರ ಜೊತೆ ನಡೆಸಿದ ಸಭೆಯಲ್ಲಿ ಲಿಂಗಾಯತ ಕಡೆಗಣನೆ ಅಸ್ತ್ರ ಎದುರಿಸಲು ರಾಜ್ಯ ನಾಯಕರಿಗೆ ಅಮಿತ್ ಶಾ ತಂತ್ರವನ್ನು ರವಾನಿಸಿದ್ದಾರೆ. ಈ ಲಿಂಗಾಯತ ದಾಳವನ್ನು ಚುನಾವಣೆ ಮುಗಿಯುವವರೆಗೂ ಬಳಕೆ ಮಾಡುವಂತೆ ತಾಕೀತು ಮಾಡಿದ್ದಾರೆ.

ಶಾ ತಂತ್ರಗಾರಿಕೆ:
ಲಿಂಗಾಯತ ಸಿಎಂ ದಾಳ ಕಡೆಯವರೆಗೂ ಇರಿಸಿಕೊಳ್ಳಿ. ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‍ಗಿಂತಲೂ ಬಿಜೆಪಿಯ ಕೊಡುಗೆಯೇ ಹೆಚ್ಚಿದ್ದು, ಕಾಂಗ್ರೆಸ್ ಕಣ್ಣು ಒರೆಸುವ ತಂತ್ರಗಳಿಂದ ಸಮಯ ಸಾಧಕ ಆಟವಾಡುತ್ತಿದೆ.

ಈವರೆಗೆ ಇಬ್ಬರು ಲಿಂಗಾಯತ ಸಮುದಾಯದವರಿಗೆ ಸಿಎಂ ಸ್ಥಾನ ನೀಡಿದ್ದು ಮಾತ್ರವಲ್ಲದೇ ಅತೀ ಹೆಚ್ಚು ಟಿಕೆಟ್ ನೀಡಿ ಅತೀ ಹೆಚ್ಚು ಶಾಸಕರನ್ನು ಮಂತ್ರಿಗಳನ್ನಾಗಿ ಮಾಡಿದೆ.

ಬಿಜೆಪಿ ಲಿಂಗಾಯತ ನಾಯಕರಿಗೆ ಸೂಕ್ತ ಸ್ಥಾನಮಾನ, ಗೌರವ, ಪದವಿ ಅವಕಾಶ ಕೊಟ್ಟಿದ್ದರೆ ಕಾಂಗ್ರೆಸ್ ಒಬ್ಬರಿಗೂ ಸಿಎಂ ಹುದ್ದೆ ಕೊಟ್ಟಿಲ್ಲ. ಸಿಎಂ ಆಗಿದ್ದ ವಿರೇಂದ್ರ ಪಾಟೀಲರನ್ನು ಕಾಂಗ್ರೆಸ್ ಹೀನಾಯವಾಗಿ ನಡೆಸಿಕೊಂಡು ಕೇವಲ ಒಂಭತ್ತೇ ತಿಂಗಳಿಗೆ ಸಿಎಂ ಹುದ್ದೆ ಕಿತ್ತುಕೊಂಡು ಅಪಮಾನ ಮಾಡಿತ್ತು.

ಲಕ್ಷ್ಮಣ ಸವದಿ ಚುನಾವಣೆಯಲ್ಲಿ ಸೋತಿದ್ದರೂ ಪರಿಷತ್‌ಗೆ ಆಯ್ಕೆ ಮಾಡಿ ಡಿಸಿಎಂ ಮಾಡಲಾಗಿತ್ತು. ಜಗದೀಶ್ ಶೆಟ್ಟರ್‌ ಅವರಿಗೆ ಎಲ್ಲ ಪದವಿ ನೀಡಿ ಸಿಎಂ ಹುದ್ದೆಯನ್ನು ನೀಡಿ ಗೌರವ ನೀಡಲಾಗಿತ್ತು. ಪಕ್ಷದಲ್ಲಿ ಎಲ್ಲ ಸ್ಥಾನಮಾನ ಅನುಭವಿಸಿದವರು ಈಗ ಪಕ್ಷದ್ರೋಹ ಮಾಡಿ ಹೋಗಿದ್ದಾರೆ. ಈ ವಿಚಾರವನ್ನು ಮನವರಿಕೆ ಮಾಡಿ ಜಾಗೃತಿ ಮೂಡಿಸಿ ಮತದಾರರ ಗೊಂದಲವನ್ನು ತಪ್ಪಿಸಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

49 minutes ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 hour ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

12 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

23 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

24 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago