Advertisement
ಸುದ್ದಿಗಳು

ಚುನಾವಣೆ ಮುಗಿಯುವವರೆಗೂ ಲಿಂಗಾಯತ ದಾಳ ಬಳಸಿ: ಶಾ ತಾಕೀತು

Share

ಚುನಾವಣೆ ಹೊತ್ತಲ್ಲಿ ರಾಜಕಾರಣಿಗಳಿಗೆ ಹೊಸ ಅಸ್ತ್ರ ಸಿಕ್ಕಿದೆ. ಅದುವೇ ಲಿಂಗಾಯತ ಸಿಎಂ ಅಸ್ತ್ರ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಬಿಜೆಪಿ ವಿರುದ್ಧ ನೇರಾನೇರ ಸಮರ ನಡೆಯುತ್ತಿದೆ.

ಚುನಾವಣೆ ಸಮಯದದಲ್ಲಿ ಇದು ಬಿಜೆಪಿಗೆ ಟೆನ್ಷನ್ ಹೆಚ್ಚಿಸಿದ್ದು ಲಿಂಗಾಯತರ ಕಡೆಗಣನೆ ಆರೋಪದಿಂದ ಚುನಾವಣೆ ಹೊಡೆತದ ಆತಂಕ ಎದುರಾಗಿದೆ. ಈ ಲಿಂಗಾಯತ ಸಿಎಂ ಟೆನ್ಷನ್ ವಿಚಾರಕ್ಕೆ ಅಮಿತ್ ಶಾ ತಮ್ಮದೇ ಆದ ಸೂತ್ರವೊಂದನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ರಾಜ್ಯ ನಾಯಕರ ಜೊತೆ ನಡೆಸಿದ ಸಭೆಯಲ್ಲಿ ಲಿಂಗಾಯತ ಕಡೆಗಣನೆ ಅಸ್ತ್ರ ಎದುರಿಸಲು ರಾಜ್ಯ ನಾಯಕರಿಗೆ ಅಮಿತ್ ಶಾ ತಂತ್ರವನ್ನು ರವಾನಿಸಿದ್ದಾರೆ. ಈ ಲಿಂಗಾಯತ ದಾಳವನ್ನು ಚುನಾವಣೆ ಮುಗಿಯುವವರೆಗೂ ಬಳಕೆ ಮಾಡುವಂತೆ ತಾಕೀತು ಮಾಡಿದ್ದಾರೆ.

ಶಾ ತಂತ್ರಗಾರಿಕೆ:
ಲಿಂಗಾಯತ ಸಿಎಂ ದಾಳ ಕಡೆಯವರೆಗೂ ಇರಿಸಿಕೊಳ್ಳಿ. ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‍ಗಿಂತಲೂ ಬಿಜೆಪಿಯ ಕೊಡುಗೆಯೇ ಹೆಚ್ಚಿದ್ದು, ಕಾಂಗ್ರೆಸ್ ಕಣ್ಣು ಒರೆಸುವ ತಂತ್ರಗಳಿಂದ ಸಮಯ ಸಾಧಕ ಆಟವಾಡುತ್ತಿದೆ.

ಈವರೆಗೆ ಇಬ್ಬರು ಲಿಂಗಾಯತ ಸಮುದಾಯದವರಿಗೆ ಸಿಎಂ ಸ್ಥಾನ ನೀಡಿದ್ದು ಮಾತ್ರವಲ್ಲದೇ ಅತೀ ಹೆಚ್ಚು ಟಿಕೆಟ್ ನೀಡಿ ಅತೀ ಹೆಚ್ಚು ಶಾಸಕರನ್ನು ಮಂತ್ರಿಗಳನ್ನಾಗಿ ಮಾಡಿದೆ.

ಬಿಜೆಪಿ ಲಿಂಗಾಯತ ನಾಯಕರಿಗೆ ಸೂಕ್ತ ಸ್ಥಾನಮಾನ, ಗೌರವ, ಪದವಿ ಅವಕಾಶ ಕೊಟ್ಟಿದ್ದರೆ ಕಾಂಗ್ರೆಸ್ ಒಬ್ಬರಿಗೂ ಸಿಎಂ ಹುದ್ದೆ ಕೊಟ್ಟಿಲ್ಲ. ಸಿಎಂ ಆಗಿದ್ದ ವಿರೇಂದ್ರ ಪಾಟೀಲರನ್ನು ಕಾಂಗ್ರೆಸ್ ಹೀನಾಯವಾಗಿ ನಡೆಸಿಕೊಂಡು ಕೇವಲ ಒಂಭತ್ತೇ ತಿಂಗಳಿಗೆ ಸಿಎಂ ಹುದ್ದೆ ಕಿತ್ತುಕೊಂಡು ಅಪಮಾನ ಮಾಡಿತ್ತು.

ಲಕ್ಷ್ಮಣ ಸವದಿ ಚುನಾವಣೆಯಲ್ಲಿ ಸೋತಿದ್ದರೂ ಪರಿಷತ್‌ಗೆ ಆಯ್ಕೆ ಮಾಡಿ ಡಿಸಿಎಂ ಮಾಡಲಾಗಿತ್ತು. ಜಗದೀಶ್ ಶೆಟ್ಟರ್‌ ಅವರಿಗೆ ಎಲ್ಲ ಪದವಿ ನೀಡಿ ಸಿಎಂ ಹುದ್ದೆಯನ್ನು ನೀಡಿ ಗೌರವ ನೀಡಲಾಗಿತ್ತು. ಪಕ್ಷದಲ್ಲಿ ಎಲ್ಲ ಸ್ಥಾನಮಾನ ಅನುಭವಿಸಿದವರು ಈಗ ಪಕ್ಷದ್ರೋಹ ಮಾಡಿ ಹೋಗಿದ್ದಾರೆ. ಈ ವಿಚಾರವನ್ನು ಮನವರಿಕೆ ಮಾಡಿ ಜಾಗೃತಿ ಮೂಡಿಸಿ ಮತದಾರರ ಗೊಂದಲವನ್ನು ತಪ್ಪಿಸಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

4 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

13 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

14 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

21 hours ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

1 day ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

1 day ago