Advertisement
ಸುದ್ದಿಗಳು

ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ – ಶೆಟ್ಟರ್, ಸವದಿ ವಿರುದ್ಧ ಅಮಿತ್ ಶಾ ವಾಗ್ದಾಳಿ

Share

ಟಿಕೆಟ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ರೋಡ್ ಶೋ ವೇಳೆ ಮಾತನಾಡಿದ ಅವರು, ಶೆಟ್ಟರ್ ಹೋಗಿದ್ರಿಂದ ಪಕ್ಷಕ್ಕೇನು ನಷ್ಟವಿಲ್ಲ. ಸ್ವತಃ ಶೆಟ್ಟರ್ ಸೋಲ್ತಾರೆ.  ಬಿಜೆಪಿ ತನ್ನದೇ ಆದ ಮತ ಬ್ಯಾಂಕ್ ಹೊಂದಿದೆ. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯವಾಗಿದೆ. ಶೆಟ್ಟರ್ ಒಬ್ಬರನ್ನು ಮಾತ್ರವಲ್ಲ, ಅನೇಕರನ್ನು ಕೈಬಿಡಲಾಗಿದೆ. ಲಿಂಗಾಯತ ಸಮುದಾಯ ಬಿಜೆಪಿ ಜೊತೆಗೆ ಇದೆ ಎಂದು ಹೇಳಿದರು.

ಶೆಟ್ಟರ್ ಒಬ್ಬರಿಗೆ ಟಿಕೆಟ್ ತಪ್ಪಿಸಿಲ್ಲ. ಹಲವಾರು ಹಿರಿಯರಿಗೆ ಟಿಕೆಟ್ ಕೊಟ್ಟಿಲ್ಲ. ಕಾರಣವನ್ನು ಶೆಟ್ಟರ್‌ಗೆ ಹೇಳಿದ್ದೇವೆ. ನಾವು ಅದನ್ನು ಬಹಿರಂಗಪಡಿಸಲ್ಲ. ಮತದಾರರಿಗೆ ಯಾವ ರೀತಿ ಹೇಳಬೇಕೋ ಆ ರೀತಿ ಮುಟ್ಟಿಸುತ್ತೇವೆ. ಸವದಿ, ಶೆಟ್ಟರ್‌ಗೆ ಪಕ್ಷದಲ್ಲಿ ಎಲ್ಲಾ ಗೌರವ ಸ್ಥಾನಮಾನ ನೀಡಿದ್ದೆವು. ಲಿಂಗಾಯತರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ ಎಂದರು.

ಒಂದು ಜಾಗದಲ್ಲಿಯೂ ಲಿಂಗಾಯಿತರನ್ನು ತೆಗೆದು ಬೇರೆಯವರಿಗೆ ಕೊಟ್ಟಿಲ್ಲ. ಕಾಂಗ್ರೆಸ್‍ನವರು ಲಿಂಗಾಯಿತರಿಗೆ ಪದೇ ಪದೇ ಅಪಮಾನ ಮಾಡಿದೆ ಎಂದು ಆರೋಪಿಸುತ್ತಿದೆ. ಆದರೆ ಲಿಂಗಾಯತರ ಬಗ್ಗೆ ಮಾತನಾಡುವ ಅಧಿಕಾರ ಕಾಂಗ್ರೆಸ್‍ಗೆ ನೈತಿಕತೆಯಿಲ್ಲ. ಬಿಜೆಪಿ ಯಾವುದೇ ಕಪಿಮುಷ್ಟಿಯಲ್ಲಿಲ್ಲ. ಟೀಮ್ ವರ್ಕ್ ಮೇಲೆ ಅಧಿಕಾರಕ್ಕೆ ಬರುತ್ತದೆ. ನಾಳೆಯಿಂದ ನಿಜವಾದ ಚುನಾವಣೆ ಆಟ ಆರಂಭವಾಗಲಿದೆ. ಲೋಕಸಭೆ ಚುನಾವಣೆಯಲ್ಲಿ ಸ್ಟ್ಯಾಟಜಿ ಬದಲಾಗುತ್ತೆ. ವಿಧಾನಸಭೆಗೂ, ಲೋಕಸಭೆಗೆ ವ್ಯತ್ಯಾಸವಿದೆ ಎಂದು ಎಚ್ಚರಿಸಿದ್ದಾರೆ.

40 ಪರ್ಸೆಂಟ್ ಸರ್ಕಾರ ಆರೋಪ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ. ಎಲ್ಲಿಯೂ ಕೇಸ್ ನಡೆದಿಲ್ಲ. ಯಾವುದೇ ಕೋರ್ಟ್‍ನಲ್ಲಿಯೂ ಕೇಸ್ ಇಲ್ಲ. ಬಿಜೆಪಿ ಎಂದೆಂದಿಗೂ ಭ್ರಷ್ಟಾಚಾರದ ವಿರುದ್ಧವಿದೆ ಎಂದರು.

ಜೆಡಿಎಸ್ ಪರಿವಾರ ರಾಜಕೀಯ ಮಾಡುತ್ತದೆ. ದೇವೇಗೌಡ ಬಳಿಕ ಇದಿಗ ಅವರ ಮಗ ಕುಮಾರಸ್ವಾಮಿ ಇದ್ದಾರೆ. ನಮ್ಮ ಪಕ್ಷದಲ್ಲಿ ಅಧ್ಯಕ್ಷರು, ಸಿಎಂಗಳು ವರಿಷ್ಠರು ಬದಲಾಗುತ್ತಲೆ ಇರುತ್ತಾರೆ. ಆದರೆ ಜೆಡಿಎಸ್‍ನಲ್ಲಿ ದೇವೇಗೌಡ ಕುಟುಂಬದ ಪ್ರತಿಯೊಬ್ಬರು ಚುನಾವಣೆ ಸ್ಪರ್ಧಿಸುತ್ತಾರೆ. ನಮ್ಮಲ್ಲಿ ಯಾವುದೇ ಕುಟುಂಬಕ್ಕೆ ಪಕ್ಷದ ಅಧಿಕಾರ ನೀಡಿಲ್ಲ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

16 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

16 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

16 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago