Advertisement
ಸುದ್ದಿಗಳು

ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ – ಶೆಟ್ಟರ್, ಸವದಿ ವಿರುದ್ಧ ಅಮಿತ್ ಶಾ ವಾಗ್ದಾಳಿ

Share

ಟಿಕೆಟ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ರೋಡ್ ಶೋ ವೇಳೆ ಮಾತನಾಡಿದ ಅವರು, ಶೆಟ್ಟರ್ ಹೋಗಿದ್ರಿಂದ ಪಕ್ಷಕ್ಕೇನು ನಷ್ಟವಿಲ್ಲ. ಸ್ವತಃ ಶೆಟ್ಟರ್ ಸೋಲ್ತಾರೆ.  ಬಿಜೆಪಿ ತನ್ನದೇ ಆದ ಮತ ಬ್ಯಾಂಕ್ ಹೊಂದಿದೆ. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯವಾಗಿದೆ. ಶೆಟ್ಟರ್ ಒಬ್ಬರನ್ನು ಮಾತ್ರವಲ್ಲ, ಅನೇಕರನ್ನು ಕೈಬಿಡಲಾಗಿದೆ. ಲಿಂಗಾಯತ ಸಮುದಾಯ ಬಿಜೆಪಿ ಜೊತೆಗೆ ಇದೆ ಎಂದು ಹೇಳಿದರು.

ಶೆಟ್ಟರ್ ಒಬ್ಬರಿಗೆ ಟಿಕೆಟ್ ತಪ್ಪಿಸಿಲ್ಲ. ಹಲವಾರು ಹಿರಿಯರಿಗೆ ಟಿಕೆಟ್ ಕೊಟ್ಟಿಲ್ಲ. ಕಾರಣವನ್ನು ಶೆಟ್ಟರ್‌ಗೆ ಹೇಳಿದ್ದೇವೆ. ನಾವು ಅದನ್ನು ಬಹಿರಂಗಪಡಿಸಲ್ಲ. ಮತದಾರರಿಗೆ ಯಾವ ರೀತಿ ಹೇಳಬೇಕೋ ಆ ರೀತಿ ಮುಟ್ಟಿಸುತ್ತೇವೆ. ಸವದಿ, ಶೆಟ್ಟರ್‌ಗೆ ಪಕ್ಷದಲ್ಲಿ ಎಲ್ಲಾ ಗೌರವ ಸ್ಥಾನಮಾನ ನೀಡಿದ್ದೆವು. ಲಿಂಗಾಯತರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ ಎಂದರು.

ಒಂದು ಜಾಗದಲ್ಲಿಯೂ ಲಿಂಗಾಯಿತರನ್ನು ತೆಗೆದು ಬೇರೆಯವರಿಗೆ ಕೊಟ್ಟಿಲ್ಲ. ಕಾಂಗ್ರೆಸ್‍ನವರು ಲಿಂಗಾಯಿತರಿಗೆ ಪದೇ ಪದೇ ಅಪಮಾನ ಮಾಡಿದೆ ಎಂದು ಆರೋಪಿಸುತ್ತಿದೆ. ಆದರೆ ಲಿಂಗಾಯತರ ಬಗ್ಗೆ ಮಾತನಾಡುವ ಅಧಿಕಾರ ಕಾಂಗ್ರೆಸ್‍ಗೆ ನೈತಿಕತೆಯಿಲ್ಲ. ಬಿಜೆಪಿ ಯಾವುದೇ ಕಪಿಮುಷ್ಟಿಯಲ್ಲಿಲ್ಲ. ಟೀಮ್ ವರ್ಕ್ ಮೇಲೆ ಅಧಿಕಾರಕ್ಕೆ ಬರುತ್ತದೆ. ನಾಳೆಯಿಂದ ನಿಜವಾದ ಚುನಾವಣೆ ಆಟ ಆರಂಭವಾಗಲಿದೆ. ಲೋಕಸಭೆ ಚುನಾವಣೆಯಲ್ಲಿ ಸ್ಟ್ಯಾಟಜಿ ಬದಲಾಗುತ್ತೆ. ವಿಧಾನಸಭೆಗೂ, ಲೋಕಸಭೆಗೆ ವ್ಯತ್ಯಾಸವಿದೆ ಎಂದು ಎಚ್ಚರಿಸಿದ್ದಾರೆ.

40 ಪರ್ಸೆಂಟ್ ಸರ್ಕಾರ ಆರೋಪ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ. ಎಲ್ಲಿಯೂ ಕೇಸ್ ನಡೆದಿಲ್ಲ. ಯಾವುದೇ ಕೋರ್ಟ್‍ನಲ್ಲಿಯೂ ಕೇಸ್ ಇಲ್ಲ. ಬಿಜೆಪಿ ಎಂದೆಂದಿಗೂ ಭ್ರಷ್ಟಾಚಾರದ ವಿರುದ್ಧವಿದೆ ಎಂದರು.

ಜೆಡಿಎಸ್ ಪರಿವಾರ ರಾಜಕೀಯ ಮಾಡುತ್ತದೆ. ದೇವೇಗೌಡ ಬಳಿಕ ಇದಿಗ ಅವರ ಮಗ ಕುಮಾರಸ್ವಾಮಿ ಇದ್ದಾರೆ. ನಮ್ಮ ಪಕ್ಷದಲ್ಲಿ ಅಧ್ಯಕ್ಷರು, ಸಿಎಂಗಳು ವರಿಷ್ಠರು ಬದಲಾಗುತ್ತಲೆ ಇರುತ್ತಾರೆ. ಆದರೆ ಜೆಡಿಎಸ್‍ನಲ್ಲಿ ದೇವೇಗೌಡ ಕುಟುಂಬದ ಪ್ರತಿಯೊಬ್ಬರು ಚುನಾವಣೆ ಸ್ಪರ್ಧಿಸುತ್ತಾರೆ. ನಮ್ಮಲ್ಲಿ ಯಾವುದೇ ಕುಟುಂಬಕ್ಕೆ ಪಕ್ಷದ ಅಧಿಕಾರ ನೀಡಿಲ್ಲ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

14 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago