Advertisement
ಸುದ್ದಿಗಳು

ಹನುಮ ಭಕ್ತ ಬಜರಂಗದಳದವರು ಸಿಡಿದೆದ್ರೆ ಅಷ್ಟೆ : ಕಾಂಗ್ರೆಸ್ ಬೇರು ಸಮೇತ ಕಿತ್ತೋಗುತ್ತೆ: ಸಿಎಂ ಬೊಮ್ಮಾಯಿ

Share

ಬಜರಂಗದಳದವರು ನಮ್ಮ ಹನುಮನ ಭಕ್ತರು. ಒಬ್ಬೊಬ್ಬರು ಸಿಡಿದು ನಿಂತರೆ ಬೇರು ಸಮೇತ ಕಿತ್ತು ಹೋಗುತ್ತೀರಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ‌  ಪರ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಮಾತನಾಡಿ, ನವಲಗುಂದಕ್ಕೆ ಇದು ಬಂಡಾಯ ನಾಡು ಎಂದು ಕರೆದರು. ಈ ಭಾಗದಲ್ಲಿ ಮಹದಾಯಿ ನೀರು ಬಂದಿರಲಿಲ್ಲ, ರೈತರ ಮೇಲೆ ಗುಂಡು ಹಾಕಿದ ಸರ್ಕಾರ ಕಾಂಗ್ರೆಸ್ ಎಂದು ಟೀಕಿಸಿದ ಅವರು, ಮಹದಾಯಿ ನೀರನ್ನು ಮಲಪ್ರಭೆಗೆ ತಂದು ನೀರು ಕೊಡಲು ಅಡ್ಡ ಹಾಕಿದ್ದ ಕಾಂಗ್ರೆಸ್, ಸೋನಿಯಾ ಗಾಂಧಿ ಅವರು ಗೋವಾದಲ್ಲಿ ಹೋಗಿ ಹನಿ ನೀರು ಕೊಡಲ್ಲ ಎಂದಿದ್ರು ಎಂದರು.

ಮನಮೋಹನ್ ಸಿಂಗ್ ಅವರು ನಮಗೆ ನೀರು ಕೊಡಲು ಟ್ರಿಬುನಲ್ ಮಾಡಿದ್ರು, ಸಿದ್ದರಾಮಯ್ಯ ಸರ್ಕಾರ ಗೋಡೆ ಕಟ್ಟಿದ್ರು, ಒಂದು ಕೋಟಿ ಖರ್ಚು ಮಾಡಿ ನಾವು ಕೆನಲ್ ಕಟ್ಟಿದೆವು, ಗೋಡೆ ಕಟ್ಟಿದೆವು ಎಂದ ಸಿಎಂ, ಇದೇ ನವಲಗುಂದ ತಾಲೂಕಿನಲ್ಲಿ ಹೆಣ್ಣು ಮಕ್ಕಳ ಮೇಲೆ ಲಾಠಿ ಹೊಡೆದವರಿಗೆ ಮತ ಹಾಕ್ತಿರಾ ಎಂದು ಪ್ರಶ್ನೆ ಮಾಡಿದರು. ಮೋದಿ ಅವರು ನಮಗೆ ಮಹದಾಯಿಗಾಗಿ ಅನುಮತಿ ಕೊಟ್ಡಿದ್ದಾರೆ. ನಾವು ಟೆಂಡರ್ ಮಾಡಿದ್ದೇವೆ, ಕೆಲಸ ಆರಂಭ ಆಗಲಿದೆ ಎಂದ ಬೊಮ್ಮಾಯಿ, ಈಗಾಗಲೇ ನಾನು ಒಂದು ಸಾವಿರ ಕೋಟಿ ಕೊಟ್ಟಿದ್ದೇನೆ. ಎರಡು ವರ್ಷದಲ್ಲಿ ಕಾಮಗಾರಿ ಮಾಡ್ತೇವೆ ಎಂದರು.

ಗ್ಯಾರಂಟಿ ಕೊಡುತ್ತಾರೆ ಕಾಂಗ್ರೆಸ್ ನವರು, ಮೋದಿ ಅವರ ಅಕ್ಕಿ ಅದು, ಎಲ್ಲ ಗ್ಯಾರಂಟಿ ಮೇ 10ವರೆಗೆ, ಅದರ ನಂತರ ಗಳಗಂಟಿ ಎಂದ ಸಿಎಂ, ಮೀಸಲಾತಿ ಹೆಚ್ಚಳ ಮಾಡಿದೆ. ನಮ್ಮ ದುಡಿಯುವ ಜನರಿಗೆ ಮೀಸಲಾತಿ ಕೊಟ್ಟಿದ್ದೇವೆ, ನಮ್ಮ ಎದುರಿಗೆ ಅವರು ವಿರೋಧ ಮಾಡಿ ಕೋರ್ಟ್‍ಗೆ ಹೋಗಿದ್ದಾರೆ ಎಂದರು.

ನಾವು ಬಜರಂಗದಳ ಬ್ಯಾನ್ ಮಾಡುತ್ತೇವೆ ಅಂತಾರೆ, ಭಯೋತ್ಪಾದನೆ ಮಾಡಿದ ಪಿಎಫ್‍ಐಗೆ ಅವರು ಕೇಸ್ ವಾಪಸ್ ಪಡೆದರು, ಬಜರಂಗದಳದವರು ನಮ್ಮ ಹನುಮನ ಭಕ್ತರು, ಒಬ್ಬೊಬ್ಬರು ಸಿಡಿದು ನಿಂತರೆ ಬೇರು ಸಮೇತ ಕಿತ್ತು ಹೋಗ್ತೀರಿ ಎಂದ ಸಿಎಂ, ರಾಮನ ದೇವಸ್ಥಾನ ಆಗುತ್ತಿದೆ. ಸಬ್ ಕಾ ವಿಕಾಸ ನಾವು ಮಾಡುತ್ತೇವೆ. ಮನೆ ಮನೆಗೆ ಹೋಗಿ ಮೇ 10 ಕ್ಕೆ ಮುನೇನಕೊಪ್ಪ ಅವರಿಗೆ ಮತ ಹಾಕುವಂತೆ ಹೇಳಿ, ಬಹಳ ಜನ ಮಾತನಾಡುತ್ತಾರೆ. ಆದರೆ ಜಗದೇಕ ಮಲ್ಲ ಮುನೇನಕೊಪ್ಪ, 25 ಸಾವಿತ ಮತದಿಂದ ಗೆಲ್ಲಿಸಿ ಎಂದು ಕೇಸರಿ ಶಾಲು ತಿರುವಿಸಿ ಬಜರಂಗಿ ಎಂದು ಘೋಷಣೆ ಹಾಕಿದರು. ಇದೇ ವೇಳೆ ಕುರುಬ ಸಮುದಾಯದಿಂದ ಸಿಎಂಗೆ ಕಂಬಳಿ ಹೊದಿಸಿ ಸನ್ಮಾನ ಮಾಡಿದರು. ಸಿಎಂಗೆ ಟಗರು ಮರಿ ಕೊಟ್ಟ ನಂತರ ಅದಕ್ಕೆ ಕೈಯಲ್ಲಿ ಹಿಡಿದು ಸಿಎಂ ಮುತ್ತಿಟ್ಟರು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

11 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago