Advertisement
ಸುದ್ದಿಗಳು

ಹನುಮ ಭಕ್ತ ಬಜರಂಗದಳದವರು ಸಿಡಿದೆದ್ರೆ ಅಷ್ಟೆ : ಕಾಂಗ್ರೆಸ್ ಬೇರು ಸಮೇತ ಕಿತ್ತೋಗುತ್ತೆ: ಸಿಎಂ ಬೊಮ್ಮಾಯಿ

Share

ಬಜರಂಗದಳದವರು ನಮ್ಮ ಹನುಮನ ಭಕ್ತರು. ಒಬ್ಬೊಬ್ಬರು ಸಿಡಿದು ನಿಂತರೆ ಬೇರು ಸಮೇತ ಕಿತ್ತು ಹೋಗುತ್ತೀರಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ‌  ಪರ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಮಾತನಾಡಿ, ನವಲಗುಂದಕ್ಕೆ ಇದು ಬಂಡಾಯ ನಾಡು ಎಂದು ಕರೆದರು. ಈ ಭಾಗದಲ್ಲಿ ಮಹದಾಯಿ ನೀರು ಬಂದಿರಲಿಲ್ಲ, ರೈತರ ಮೇಲೆ ಗುಂಡು ಹಾಕಿದ ಸರ್ಕಾರ ಕಾಂಗ್ರೆಸ್ ಎಂದು ಟೀಕಿಸಿದ ಅವರು, ಮಹದಾಯಿ ನೀರನ್ನು ಮಲಪ್ರಭೆಗೆ ತಂದು ನೀರು ಕೊಡಲು ಅಡ್ಡ ಹಾಕಿದ್ದ ಕಾಂಗ್ರೆಸ್, ಸೋನಿಯಾ ಗಾಂಧಿ ಅವರು ಗೋವಾದಲ್ಲಿ ಹೋಗಿ ಹನಿ ನೀರು ಕೊಡಲ್ಲ ಎಂದಿದ್ರು ಎಂದರು.

ಮನಮೋಹನ್ ಸಿಂಗ್ ಅವರು ನಮಗೆ ನೀರು ಕೊಡಲು ಟ್ರಿಬುನಲ್ ಮಾಡಿದ್ರು, ಸಿದ್ದರಾಮಯ್ಯ ಸರ್ಕಾರ ಗೋಡೆ ಕಟ್ಟಿದ್ರು, ಒಂದು ಕೋಟಿ ಖರ್ಚು ಮಾಡಿ ನಾವು ಕೆನಲ್ ಕಟ್ಟಿದೆವು, ಗೋಡೆ ಕಟ್ಟಿದೆವು ಎಂದ ಸಿಎಂ, ಇದೇ ನವಲಗುಂದ ತಾಲೂಕಿನಲ್ಲಿ ಹೆಣ್ಣು ಮಕ್ಕಳ ಮೇಲೆ ಲಾಠಿ ಹೊಡೆದವರಿಗೆ ಮತ ಹಾಕ್ತಿರಾ ಎಂದು ಪ್ರಶ್ನೆ ಮಾಡಿದರು. ಮೋದಿ ಅವರು ನಮಗೆ ಮಹದಾಯಿಗಾಗಿ ಅನುಮತಿ ಕೊಟ್ಡಿದ್ದಾರೆ. ನಾವು ಟೆಂಡರ್ ಮಾಡಿದ್ದೇವೆ, ಕೆಲಸ ಆರಂಭ ಆಗಲಿದೆ ಎಂದ ಬೊಮ್ಮಾಯಿ, ಈಗಾಗಲೇ ನಾನು ಒಂದು ಸಾವಿರ ಕೋಟಿ ಕೊಟ್ಟಿದ್ದೇನೆ. ಎರಡು ವರ್ಷದಲ್ಲಿ ಕಾಮಗಾರಿ ಮಾಡ್ತೇವೆ ಎಂದರು.

ಗ್ಯಾರಂಟಿ ಕೊಡುತ್ತಾರೆ ಕಾಂಗ್ರೆಸ್ ನವರು, ಮೋದಿ ಅವರ ಅಕ್ಕಿ ಅದು, ಎಲ್ಲ ಗ್ಯಾರಂಟಿ ಮೇ 10ವರೆಗೆ, ಅದರ ನಂತರ ಗಳಗಂಟಿ ಎಂದ ಸಿಎಂ, ಮೀಸಲಾತಿ ಹೆಚ್ಚಳ ಮಾಡಿದೆ. ನಮ್ಮ ದುಡಿಯುವ ಜನರಿಗೆ ಮೀಸಲಾತಿ ಕೊಟ್ಟಿದ್ದೇವೆ, ನಮ್ಮ ಎದುರಿಗೆ ಅವರು ವಿರೋಧ ಮಾಡಿ ಕೋರ್ಟ್‍ಗೆ ಹೋಗಿದ್ದಾರೆ ಎಂದರು.

ನಾವು ಬಜರಂಗದಳ ಬ್ಯಾನ್ ಮಾಡುತ್ತೇವೆ ಅಂತಾರೆ, ಭಯೋತ್ಪಾದನೆ ಮಾಡಿದ ಪಿಎಫ್‍ಐಗೆ ಅವರು ಕೇಸ್ ವಾಪಸ್ ಪಡೆದರು, ಬಜರಂಗದಳದವರು ನಮ್ಮ ಹನುಮನ ಭಕ್ತರು, ಒಬ್ಬೊಬ್ಬರು ಸಿಡಿದು ನಿಂತರೆ ಬೇರು ಸಮೇತ ಕಿತ್ತು ಹೋಗ್ತೀರಿ ಎಂದ ಸಿಎಂ, ರಾಮನ ದೇವಸ್ಥಾನ ಆಗುತ್ತಿದೆ. ಸಬ್ ಕಾ ವಿಕಾಸ ನಾವು ಮಾಡುತ್ತೇವೆ. ಮನೆ ಮನೆಗೆ ಹೋಗಿ ಮೇ 10 ಕ್ಕೆ ಮುನೇನಕೊಪ್ಪ ಅವರಿಗೆ ಮತ ಹಾಕುವಂತೆ ಹೇಳಿ, ಬಹಳ ಜನ ಮಾತನಾಡುತ್ತಾರೆ. ಆದರೆ ಜಗದೇಕ ಮಲ್ಲ ಮುನೇನಕೊಪ್ಪ, 25 ಸಾವಿತ ಮತದಿಂದ ಗೆಲ್ಲಿಸಿ ಎಂದು ಕೇಸರಿ ಶಾಲು ತಿರುವಿಸಿ ಬಜರಂಗಿ ಎಂದು ಘೋಷಣೆ ಹಾಕಿದರು. ಇದೇ ವೇಳೆ ಕುರುಬ ಸಮುದಾಯದಿಂದ ಸಿಎಂಗೆ ಕಂಬಳಿ ಹೊದಿಸಿ ಸನ್ಮಾನ ಮಾಡಿದರು. ಸಿಎಂಗೆ ಟಗರು ಮರಿ ಕೊಟ್ಟ ನಂತರ ಅದಕ್ಕೆ ಕೈಯಲ್ಲಿ ಹಿಡಿದು ಸಿಎಂ ಮುತ್ತಿಟ್ಟರು ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

3 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

12 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

20 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

20 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago