ಸಿ.ಟಿ ರವಿ ಬಿಜೆಪಿಯನ್ನು ಮುಳುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಕಿಡಿಕಾರಿದರು.
ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ಕೈತಪ್ಪುವಂತೆ ಮಾಡಿರುವುದರ ಹಿಂದೆ ಸಿ.ಟಿ. ರವಿ ಕೈವಾಡ ಇದೆ. ಬಿಜೆಪಿ ಸಿ.ಟಿ ರವಿಯನ್ನು ನಂಬಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಅನುಭವಿಸುತ್ತದೆ. ಸಿಟಿ ರವಿ ಓದ್ಕೊಂಡು ಬಂದಿಲ್ಲ. ಸಂಘ ಪರಿವಾರದ ಜೊತೆ ಇದ್ದು ಮಾತನಾಡುವುದನ್ನು ಕಲಿತುಕೊಂಡಿದ್ದಾನೆ ಎಂದು ವಾಗ್ದಾಳಿ ನಡೆಸಿದರು.
ಹೈಕಮಾಂಡ್ಗೆ ನನ್ನ ಬಗ್ಗೆ ತಪ್ಪು ವರದಿ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಕ್ಕೆ ರಾಜಕಾರಣ ಮಾಡುತ್ತಿದ್ದಾರೆ. ಕೆಲ ರಾಜ್ಯ ನಾಯಕರೇ ಇದಕ್ಕೆ ಕಾರಣ. ಸಿಟಿ ರವಿ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಿ ತಿಳಿದಿದೆ. ಹೈಕಮಾಂಡ್ ಮುಂದೆ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಟಿಕೆಟ್ ತಪ್ಪಿಸಿದ್ದಾರೆ. ಬಿಜೆಪಿ ಮುಗಿಸುವವರೆಗೂ ಸಿ.ಟಿ ರವಿ ವಿಶ್ರಾಂತಿ ಪಡೆಯುವುದಿಲ್ಲ. ಪಕ್ಷಕ್ಕೆ ಇದು ಮುಂದೇ ಗೊತ್ತಾಗುತ್ತದೆ ಎಂದು ಗುಡುಗಿದರು.
ಯಡಿಯೂರಪ್ಪ ಸ್ವಿಚ್ ಆಫ್ ಮಾಡಿದ್ರೆ ಬಿಜೆಪಿಗೆ 50 ಸೀಟ್ ಬರುವುದಿಲ್ಲ. ಟಿಕೆಟ್ ಕೈ ತಪ್ಪಿದ ಬಳಿಕ ಯಾವ ಒಬ್ಬ ನಾಯಕರು ಕರೆ ಮಾಡಿ ಮಾತನಾಡಿಲ್ಲ. ನಾನೇ ಸಿಎಂ ಭೇಟಿ ಮಾಡಿದ್ದೆ, ಸಿಎಂ ಅವರು ಮಾತನಾಡಿದ ದಾಟಿಯಿಂದಾಗಿ ನನಗೆ ಟಿಕೆಟ್ ಇಲ್ಲ ಎನ್ನುವುದು ಖಚಿತವಾಗಿತ್ತು ಎಂದು ಕಿಡಿಕಾರಿದ ಅವರು, ಶಾಸಕ ಭವನದಿಂದ ಹೊರಟರು. ಈ ವೇಳೆ ಶಾಸಕನಾಗಿಯೇ ಮರಳಿ ಬರೋದಾಗಿ ಶಪಥ ಮಾಡಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…