ಸಿ.ಟಿ ರವಿ ಬಿಜೆಪಿಯನ್ನು ಮುಳುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಕಿಡಿಕಾರಿದರು.
ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ಕೈತಪ್ಪುವಂತೆ ಮಾಡಿರುವುದರ ಹಿಂದೆ ಸಿ.ಟಿ. ರವಿ ಕೈವಾಡ ಇದೆ. ಬಿಜೆಪಿ ಸಿ.ಟಿ ರವಿಯನ್ನು ನಂಬಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಅನುಭವಿಸುತ್ತದೆ. ಸಿಟಿ ರವಿ ಓದ್ಕೊಂಡು ಬಂದಿಲ್ಲ. ಸಂಘ ಪರಿವಾರದ ಜೊತೆ ಇದ್ದು ಮಾತನಾಡುವುದನ್ನು ಕಲಿತುಕೊಂಡಿದ್ದಾನೆ ಎಂದು ವಾಗ್ದಾಳಿ ನಡೆಸಿದರು.
ಹೈಕಮಾಂಡ್ಗೆ ನನ್ನ ಬಗ್ಗೆ ತಪ್ಪು ವರದಿ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಕ್ಕೆ ರಾಜಕಾರಣ ಮಾಡುತ್ತಿದ್ದಾರೆ. ಕೆಲ ರಾಜ್ಯ ನಾಯಕರೇ ಇದಕ್ಕೆ ಕಾರಣ. ಸಿಟಿ ರವಿ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಿ ತಿಳಿದಿದೆ. ಹೈಕಮಾಂಡ್ ಮುಂದೆ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಟಿಕೆಟ್ ತಪ್ಪಿಸಿದ್ದಾರೆ. ಬಿಜೆಪಿ ಮುಗಿಸುವವರೆಗೂ ಸಿ.ಟಿ ರವಿ ವಿಶ್ರಾಂತಿ ಪಡೆಯುವುದಿಲ್ಲ. ಪಕ್ಷಕ್ಕೆ ಇದು ಮುಂದೇ ಗೊತ್ತಾಗುತ್ತದೆ ಎಂದು ಗುಡುಗಿದರು.
ಯಡಿಯೂರಪ್ಪ ಸ್ವಿಚ್ ಆಫ್ ಮಾಡಿದ್ರೆ ಬಿಜೆಪಿಗೆ 50 ಸೀಟ್ ಬರುವುದಿಲ್ಲ. ಟಿಕೆಟ್ ಕೈ ತಪ್ಪಿದ ಬಳಿಕ ಯಾವ ಒಬ್ಬ ನಾಯಕರು ಕರೆ ಮಾಡಿ ಮಾತನಾಡಿಲ್ಲ. ನಾನೇ ಸಿಎಂ ಭೇಟಿ ಮಾಡಿದ್ದೆ, ಸಿಎಂ ಅವರು ಮಾತನಾಡಿದ ದಾಟಿಯಿಂದಾಗಿ ನನಗೆ ಟಿಕೆಟ್ ಇಲ್ಲ ಎನ್ನುವುದು ಖಚಿತವಾಗಿತ್ತು ಎಂದು ಕಿಡಿಕಾರಿದ ಅವರು, ಶಾಸಕ ಭವನದಿಂದ ಹೊರಟರು. ಈ ವೇಳೆ ಶಾಸಕನಾಗಿಯೇ ಮರಳಿ ಬರೋದಾಗಿ ಶಪಥ ಮಾಡಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…