Advertisement

ಸಿ.ಟಿ ರವಿ ಬಿಜೆಪಿ ಮುಳುಗಿಸುವ ಕೆಲಸ ಮಾಡುತ್ತಿದ್ದಾರೆ : ಎಂ.ಪಿ ಕುಮಾರಸ್ವಾಮಿ ಕಿಡಿ

Share

ಸಿ.ಟಿ ರವಿ ಬಿಜೆಪಿಯನ್ನು ಮುಳುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮೂಡಿಗೆರೆ  ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಕಿಡಿಕಾರಿದರು.

ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ಕೈತಪ್ಪುವಂತೆ ಮಾಡಿರುವುದರ ಹಿಂದೆ ಸಿ.ಟಿ. ರವಿ ಕೈವಾಡ ಇದೆ. ಬಿಜೆಪಿ ಸಿ.ಟಿ ರವಿಯನ್ನು ನಂಬಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಅನುಭವಿಸುತ್ತದೆ. ಸಿಟಿ ರವಿ ಓದ್ಕೊಂಡು ಬಂದಿಲ್ಲ. ಸಂಘ ಪರಿವಾರದ ಜೊತೆ ಇದ್ದು ಮಾತನಾಡುವುದನ್ನು ಕಲಿತುಕೊಂಡಿದ್ದಾನೆ ಎಂದು ವಾಗ್ದಾಳಿ ನಡೆಸಿದರು.

ಹೈಕಮಾಂಡ್‍ಗೆ ನನ್ನ ಬಗ್ಗೆ ತಪ್ಪು ವರದಿ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಕ್ಕೆ ರಾಜಕಾರಣ ಮಾಡುತ್ತಿದ್ದಾರೆ. ಕೆಲ ರಾಜ್ಯ ನಾಯಕರೇ ಇದಕ್ಕೆ ಕಾರಣ. ಸಿಟಿ ರವಿ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಿ ತಿಳಿದಿದೆ. ಹೈಕಮಾಂಡ್ ಮುಂದೆ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಟಿಕೆಟ್ ತಪ್ಪಿಸಿದ್ದಾರೆ. ಬಿಜೆಪಿ ಮುಗಿಸುವವರೆಗೂ ಸಿ.ಟಿ ರವಿ ವಿಶ್ರಾಂತಿ ಪಡೆಯುವುದಿಲ್ಲ. ಪಕ್ಷಕ್ಕೆ ಇದು ಮುಂದೇ ಗೊತ್ತಾಗುತ್ತದೆ ಎಂದು ಗುಡುಗಿದರು.

ಯಡಿಯೂರಪ್ಪ ಸ್ವಿಚ್ ಆಫ್ ಮಾಡಿದ್ರೆ ಬಿಜೆಪಿಗೆ 50 ಸೀಟ್ ಬರುವುದಿಲ್ಲ. ಟಿಕೆಟ್ ಕೈ ತಪ್ಪಿದ ಬಳಿಕ ಯಾವ ಒಬ್ಬ ನಾಯಕರು ಕರೆ ಮಾಡಿ ಮಾತನಾಡಿಲ್ಲ. ನಾನೇ ಸಿಎಂ ಭೇಟಿ ಮಾಡಿದ್ದೆ, ಸಿಎಂ ಅವರು ಮಾತನಾಡಿದ ದಾಟಿಯಿಂದಾಗಿ ನನಗೆ ಟಿಕೆಟ್ ಇಲ್ಲ ಎನ್ನುವುದು ಖಚಿತವಾಗಿತ್ತು ಎಂದು ಕಿಡಿಕಾರಿದ ಅವರು, ಶಾಸಕ ಭವನದಿಂದ ಹೊರಟರು. ಈ ವೇಳೆ ಶಾಸಕನಾಗಿಯೇ ಮರಳಿ ಬರೋದಾಗಿ ಶಪಥ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

5 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

6 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago