ಸಿ.ಟಿ ರವಿ ಬಿಜೆಪಿಯನ್ನು ಮುಳುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಕಿಡಿಕಾರಿದರು.
ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ಕೈತಪ್ಪುವಂತೆ ಮಾಡಿರುವುದರ ಹಿಂದೆ ಸಿ.ಟಿ. ರವಿ ಕೈವಾಡ ಇದೆ. ಬಿಜೆಪಿ ಸಿ.ಟಿ ರವಿಯನ್ನು ನಂಬಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಅನುಭವಿಸುತ್ತದೆ. ಸಿಟಿ ರವಿ ಓದ್ಕೊಂಡು ಬಂದಿಲ್ಲ. ಸಂಘ ಪರಿವಾರದ ಜೊತೆ ಇದ್ದು ಮಾತನಾಡುವುದನ್ನು ಕಲಿತುಕೊಂಡಿದ್ದಾನೆ ಎಂದು ವಾಗ್ದಾಳಿ ನಡೆಸಿದರು.
ಹೈಕಮಾಂಡ್ಗೆ ನನ್ನ ಬಗ್ಗೆ ತಪ್ಪು ವರದಿ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಕ್ಕೆ ರಾಜಕಾರಣ ಮಾಡುತ್ತಿದ್ದಾರೆ. ಕೆಲ ರಾಜ್ಯ ನಾಯಕರೇ ಇದಕ್ಕೆ ಕಾರಣ. ಸಿಟಿ ರವಿ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಿ ತಿಳಿದಿದೆ. ಹೈಕಮಾಂಡ್ ಮುಂದೆ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಟಿಕೆಟ್ ತಪ್ಪಿಸಿದ್ದಾರೆ. ಬಿಜೆಪಿ ಮುಗಿಸುವವರೆಗೂ ಸಿ.ಟಿ ರವಿ ವಿಶ್ರಾಂತಿ ಪಡೆಯುವುದಿಲ್ಲ. ಪಕ್ಷಕ್ಕೆ ಇದು ಮುಂದೇ ಗೊತ್ತಾಗುತ್ತದೆ ಎಂದು ಗುಡುಗಿದರು.
ಯಡಿಯೂರಪ್ಪ ಸ್ವಿಚ್ ಆಫ್ ಮಾಡಿದ್ರೆ ಬಿಜೆಪಿಗೆ 50 ಸೀಟ್ ಬರುವುದಿಲ್ಲ. ಟಿಕೆಟ್ ಕೈ ತಪ್ಪಿದ ಬಳಿಕ ಯಾವ ಒಬ್ಬ ನಾಯಕರು ಕರೆ ಮಾಡಿ ಮಾತನಾಡಿಲ್ಲ. ನಾನೇ ಸಿಎಂ ಭೇಟಿ ಮಾಡಿದ್ದೆ, ಸಿಎಂ ಅವರು ಮಾತನಾಡಿದ ದಾಟಿಯಿಂದಾಗಿ ನನಗೆ ಟಿಕೆಟ್ ಇಲ್ಲ ಎನ್ನುವುದು ಖಚಿತವಾಗಿತ್ತು ಎಂದು ಕಿಡಿಕಾರಿದ ಅವರು, ಶಾಸಕ ಭವನದಿಂದ ಹೊರಟರು. ಈ ವೇಳೆ ಶಾಸಕನಾಗಿಯೇ ಮರಳಿ ಬರೋದಾಗಿ ಶಪಥ ಮಾಡಿದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…