ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಿಜೆಪಿ ಭ್ರಷ್ಟ ನಾಯಕರು ಜೈಲಿಗೆ : ಬಿಕೆ ಹರಿಪ್ರಸಾದ್

April 25, 2023
9:04 AM

ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಬಿಜೆಪಿಯ ಭ್ರಷ್ಟ ನಾಯಕರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಕಾರವಾರದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಪಾಳುಬಿದ್ದ ಸ್ಮಶಾನ, ಮುರುಕಲು ಬಿದ್ದ ಮಸೀದಿ, ದೇವಸ್ಥಾನದಲ್ಲಿ ರಾಜಕೀಯ ಮಾಡುವವರು. ಜಾತಿ, ಧರ್ಮ ಹಾಗೂ ದ್ವೇಷದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಜನ ಸರಿಯಾದ ಉತ್ತರ ಕೊಡುತ್ತಾರೆ ಎಂದರು.

ಬಿಜೆಪಿಯಲ್ಲಿ ಜಾತಿ ಮತ್ತು ಧರ್ಮ ರಂಗಪ್ರವೇಶ ಮಾಡಿದೆ. ಮಾಡಾಳ್ ವಿರೂಪಾಕ್ಷ ಭ್ರಷ್ಟಾಚಾರದಲ್ಲಿ ಬಿಜೆಪಿ ಮಾಡೆಲ್ ಆಗಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಎರಡೂವರೆ ಸಾವಿರ ಕೋಟಿ ಕೊಡುವವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಯತ್ನಾಳ್ ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ದಿವಾಳಿತನದ ಭಯವಿದೆ. ಕಾಂಗ್ರೆಸ್‌ನ  ಪ್ರಮುಖ ನಾಯಕರ ಪೋನ್ ಕದ್ದಾಲಿಕೆ ಈಗಲೂ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಬಿಜೆಪಿಯವರು ಎಲ್ಲಾ ತನಿಖಾ ಸಂಸ್ಥೆಯನ್ನು ಖರೀದಿ ಮಾಡಿದ್ದಾರೆ. ಸಿಬಿಐ (CBI), ಇಡಿಗಳನ್ನು (ED) ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಹೀಗಾಗಿ ನಾವು ದೂರು ಕೊಡಲು ಹೋಗಿಲ್ಲ. ಭಾನುವಾರ ಗಂಗಾಧರ ಗೌಡರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದೆವು. ಸೋಮವಾರ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ನಾವು ಬ್ರಿಟೀಷರ ಗುಲಾಮರಾಗಿರಲಿಲ್ಲ. ಬೂಟ್ ನೆಕ್ಕಿದವರಲ್ಲ. ಬ್ರಿಟೀಷರಿಗೆ ಎದೆ ತಟ್ಟಿ ನಿಂತವರು ನಾವು. ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror