Advertisement
ಸುದ್ದಿಗಳು

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಿಜೆಪಿ ಭ್ರಷ್ಟ ನಾಯಕರು ಜೈಲಿಗೆ : ಬಿಕೆ ಹರಿಪ್ರಸಾದ್

Share

ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಬಿಜೆಪಿಯ ಭ್ರಷ್ಟ ನಾಯಕರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

Advertisement
Advertisement

ಕಾರವಾರದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಪಾಳುಬಿದ್ದ ಸ್ಮಶಾನ, ಮುರುಕಲು ಬಿದ್ದ ಮಸೀದಿ, ದೇವಸ್ಥಾನದಲ್ಲಿ ರಾಜಕೀಯ ಮಾಡುವವರು. ಜಾತಿ, ಧರ್ಮ ಹಾಗೂ ದ್ವೇಷದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಜನ ಸರಿಯಾದ ಉತ್ತರ ಕೊಡುತ್ತಾರೆ ಎಂದರು.

Advertisement

ಬಿಜೆಪಿಯಲ್ಲಿ ಜಾತಿ ಮತ್ತು ಧರ್ಮ ರಂಗಪ್ರವೇಶ ಮಾಡಿದೆ. ಮಾಡಾಳ್ ವಿರೂಪಾಕ್ಷ ಭ್ರಷ್ಟಾಚಾರದಲ್ಲಿ ಬಿಜೆಪಿ ಮಾಡೆಲ್ ಆಗಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಎರಡೂವರೆ ಸಾವಿರ ಕೋಟಿ ಕೊಡುವವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಯತ್ನಾಳ್ ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ದಿವಾಳಿತನದ ಭಯವಿದೆ. ಕಾಂಗ್ರೆಸ್‌ನ  ಪ್ರಮುಖ ನಾಯಕರ ಪೋನ್ ಕದ್ದಾಲಿಕೆ ಈಗಲೂ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಬಿಜೆಪಿಯವರು ಎಲ್ಲಾ ತನಿಖಾ ಸಂಸ್ಥೆಯನ್ನು ಖರೀದಿ ಮಾಡಿದ್ದಾರೆ. ಸಿಬಿಐ (CBI), ಇಡಿಗಳನ್ನು (ED) ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಹೀಗಾಗಿ ನಾವು ದೂರು ಕೊಡಲು ಹೋಗಿಲ್ಲ. ಭಾನುವಾರ ಗಂಗಾಧರ ಗೌಡರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದೆವು. ಸೋಮವಾರ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ನಾವು ಬ್ರಿಟೀಷರ ಗುಲಾಮರಾಗಿರಲಿಲ್ಲ. ಬೂಟ್ ನೆಕ್ಕಿದವರಲ್ಲ. ಬ್ರಿಟೀಷರಿಗೆ ಎದೆ ತಟ್ಟಿ ನಿಂತವರು ನಾವು. ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.09.2024 | ರಾಜ್ಯದಲ್ಲಿ ಮತ್ತೆ ಕೆಲವು ಕಡೆ ಮಳೆ ಸಾಧ್ಯತೆ

23.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

20 hours ago

ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ ಪರಿಹಾರಕ್ಕೆ ಸೂಚನೆ |

ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ ಪರಿಹಾರ ಒದಗಿಸಬೇಕು. ಜಂಟಿ…

2 days ago

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲ

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ…

2 days ago

ಪ್ಲಾಸ್ಟಿಕ್ ಪೆಟ್, ಬಾಟಲ್ ಗಳ ಬಳಕೆ ನಿಷೇಧ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಪೆಟ್ ಮತ್ತು ಬಾಟಲ್…

2 days ago

ಅಭಿವೃದ್ಧಿಯಾಗದ ಎರಡು ತಾಲೂಕು ಸಂಪರ್ಕದ ಗ್ರಾಮೀಣ ರಸ್ತೆ | ಪ್ರಧಾನಿ ಕಚೇರಿವರೆಗೂ ತಲಪಿತ್ತು ಬೇಡಿಕೆ | ನೂತನ ಸಂಸದರಿಗೂ ಮನವಿ |

ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಬೆಸೆಯುವ ಪರ್ಲಿಕಜೆ-ಮಾವಿನಕಟ್ಟೆ ರಸ್ತೆ ಅಭಿವೃದ್ಧಿಗಾಗಿ ಎರಡು ದಶಕಗಳಿಂದ…

2 days ago

ಹವಾಮಾನ ವರದಿ | 21-09-2024 | ನಾಳೆಯಿಂದ ಮಳೆ ಜಾಸ್ತಿಯಾಗುವ ನಿರೀಕ್ಷೆ |

ಸೆಪ್ಟೆಂಬರ್ 22ರಿಂದ ಮಳೆ ಸ್ವಲ್ಪ ಜಾಸ್ತಿ ಆಗುವ ಲಕ್ಷಣಗಳಿದ್ದು ಮುಂದಿನ 5 ಅಥವಾ…

2 days ago