ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಬಿಜೆಪಿಯ ಭ್ರಷ್ಟ ನಾಯಕರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ಕಾರವಾರದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಪಾಳುಬಿದ್ದ ಸ್ಮಶಾನ, ಮುರುಕಲು ಬಿದ್ದ ಮಸೀದಿ, ದೇವಸ್ಥಾನದಲ್ಲಿ ರಾಜಕೀಯ ಮಾಡುವವರು. ಜಾತಿ, ಧರ್ಮ ಹಾಗೂ ದ್ವೇಷದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಜನ ಸರಿಯಾದ ಉತ್ತರ ಕೊಡುತ್ತಾರೆ ಎಂದರು.
ಬಿಜೆಪಿಯಲ್ಲಿ ಜಾತಿ ಮತ್ತು ಧರ್ಮ ರಂಗಪ್ರವೇಶ ಮಾಡಿದೆ. ಮಾಡಾಳ್ ವಿರೂಪಾಕ್ಷ ಭ್ರಷ್ಟಾಚಾರದಲ್ಲಿ ಬಿಜೆಪಿ ಮಾಡೆಲ್ ಆಗಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಎರಡೂವರೆ ಸಾವಿರ ಕೋಟಿ ಕೊಡುವವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಯತ್ನಾಳ್ ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ದಿವಾಳಿತನದ ಭಯವಿದೆ. ಕಾಂಗ್ರೆಸ್ನ ಪ್ರಮುಖ ನಾಯಕರ ಪೋನ್ ಕದ್ದಾಲಿಕೆ ಈಗಲೂ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಬಿಜೆಪಿಯವರು ಎಲ್ಲಾ ತನಿಖಾ ಸಂಸ್ಥೆಯನ್ನು ಖರೀದಿ ಮಾಡಿದ್ದಾರೆ. ಸಿಬಿಐ (CBI), ಇಡಿಗಳನ್ನು (ED) ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಹೀಗಾಗಿ ನಾವು ದೂರು ಕೊಡಲು ಹೋಗಿಲ್ಲ. ಭಾನುವಾರ ಗಂಗಾಧರ ಗೌಡರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದೆವು. ಸೋಮವಾರ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ನಾವು ಬ್ರಿಟೀಷರ ಗುಲಾಮರಾಗಿರಲಿಲ್ಲ. ಬೂಟ್ ನೆಕ್ಕಿದವರಲ್ಲ. ಬ್ರಿಟೀಷರಿಗೆ ಎದೆ ತಟ್ಟಿ ನಿಂತವರು ನಾವು. ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…