ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಬಿಜೆಪಿಯ ಭ್ರಷ್ಟ ನಾಯಕರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ಕಾರವಾರದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಪಾಳುಬಿದ್ದ ಸ್ಮಶಾನ, ಮುರುಕಲು ಬಿದ್ದ ಮಸೀದಿ, ದೇವಸ್ಥಾನದಲ್ಲಿ ರಾಜಕೀಯ ಮಾಡುವವರು. ಜಾತಿ, ಧರ್ಮ ಹಾಗೂ ದ್ವೇಷದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಜನ ಸರಿಯಾದ ಉತ್ತರ ಕೊಡುತ್ತಾರೆ ಎಂದರು.
ಬಿಜೆಪಿಯಲ್ಲಿ ಜಾತಿ ಮತ್ತು ಧರ್ಮ ರಂಗಪ್ರವೇಶ ಮಾಡಿದೆ. ಮಾಡಾಳ್ ವಿರೂಪಾಕ್ಷ ಭ್ರಷ್ಟಾಚಾರದಲ್ಲಿ ಬಿಜೆಪಿ ಮಾಡೆಲ್ ಆಗಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಎರಡೂವರೆ ಸಾವಿರ ಕೋಟಿ ಕೊಡುವವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಯತ್ನಾಳ್ ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ದಿವಾಳಿತನದ ಭಯವಿದೆ. ಕಾಂಗ್ರೆಸ್ನ ಪ್ರಮುಖ ನಾಯಕರ ಪೋನ್ ಕದ್ದಾಲಿಕೆ ಈಗಲೂ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಬಿಜೆಪಿಯವರು ಎಲ್ಲಾ ತನಿಖಾ ಸಂಸ್ಥೆಯನ್ನು ಖರೀದಿ ಮಾಡಿದ್ದಾರೆ. ಸಿಬಿಐ (CBI), ಇಡಿಗಳನ್ನು (ED) ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಹೀಗಾಗಿ ನಾವು ದೂರು ಕೊಡಲು ಹೋಗಿಲ್ಲ. ಭಾನುವಾರ ಗಂಗಾಧರ ಗೌಡರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದೆವು. ಸೋಮವಾರ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ನಾವು ಬ್ರಿಟೀಷರ ಗುಲಾಮರಾಗಿರಲಿಲ್ಲ. ಬೂಟ್ ನೆಕ್ಕಿದವರಲ್ಲ. ಬ್ರಿಟೀಷರಿಗೆ ಎದೆ ತಟ್ಟಿ ನಿಂತವರು ನಾವು. ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…