ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ | ಬಿ ಎಲ್ ಸಂತೋಷ್

April 21, 2023
5:49 PM

ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್  ಹೇಳಿದರು.

ಮೈಸೂರಿನಲ್ಲಿ ಚುನಾವಣಾ ಅಖಾಡ ರಂಗೇರಿದೆ. ಮೈಸೂರು ಚುನಾವಣಾ ಅಖಾಡಕ್ಕೆ ಬಿ.ಎಲ್ ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿ, ಮಾರ್ಮಿಕವಾಗಿ ಒಂದು ಮಾತು ಹೇಳಿ ಸುಮ್ಮನಾದರು.

ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ ಅವರೆ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿಸ್ಪರ್ಧಿಯಾಗಲಿ ಎಂದು ವ್ಯಂಗ್ಯವಾಡಿದರು.

ಈ ಹಿಂದೆ ಜಗದೀಶ್ ಶೆಟ್ಟರ್ ಮಾತನಾಡಿ, ತಮಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ ಎಂದು ನೇರ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೇ ಈವರೆಗೂ ಅನೇಕ ನಾಯಕರಿಗೆ ಬಿ.ಎಲ್ ಸಂತೋಷ್ ಬಿಜೆಪಿಯಲ್ಲಿ ಟಿಕೆಟ್ ತಪ್ಪಿಸಿ, ತಮಗೆ ಬೇಕಾದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror