ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.
ಮೈಸೂರಿನಲ್ಲಿ ಚುನಾವಣಾ ಅಖಾಡ ರಂಗೇರಿದೆ. ಮೈಸೂರು ಚುನಾವಣಾ ಅಖಾಡಕ್ಕೆ ಬಿ.ಎಲ್ ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿ, ಮಾರ್ಮಿಕವಾಗಿ ಒಂದು ಮಾತು ಹೇಳಿ ಸುಮ್ಮನಾದರು.
ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ ಅವರೆ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿಸ್ಪರ್ಧಿಯಾಗಲಿ ಎಂದು ವ್ಯಂಗ್ಯವಾಡಿದರು.
ಈ ಹಿಂದೆ ಜಗದೀಶ್ ಶೆಟ್ಟರ್ ಮಾತನಾಡಿ, ತಮಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ ಎಂದು ನೇರ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೇ ಈವರೆಗೂ ಅನೇಕ ನಾಯಕರಿಗೆ ಬಿ.ಎಲ್ ಸಂತೋಷ್ ಬಿಜೆಪಿಯಲ್ಲಿ ಟಿಕೆಟ್ ತಪ್ಪಿಸಿ, ತಮಗೆ ಬೇಕಾದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…