ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.
ಮೈಸೂರಿನಲ್ಲಿ ಚುನಾವಣಾ ಅಖಾಡ ರಂಗೇರಿದೆ. ಮೈಸೂರು ಚುನಾವಣಾ ಅಖಾಡಕ್ಕೆ ಬಿ.ಎಲ್ ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿ, ಮಾರ್ಮಿಕವಾಗಿ ಒಂದು ಮಾತು ಹೇಳಿ ಸುಮ್ಮನಾದರು.
ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ ಅವರೆ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿಸ್ಪರ್ಧಿಯಾಗಲಿ ಎಂದು ವ್ಯಂಗ್ಯವಾಡಿದರು.
ಈ ಹಿಂದೆ ಜಗದೀಶ್ ಶೆಟ್ಟರ್ ಮಾತನಾಡಿ, ತಮಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ ಎಂದು ನೇರ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೇ ಈವರೆಗೂ ಅನೇಕ ನಾಯಕರಿಗೆ ಬಿ.ಎಲ್ ಸಂತೋಷ್ ಬಿಜೆಪಿಯಲ್ಲಿ ಟಿಕೆಟ್ ತಪ್ಪಿಸಿ, ತಮಗೆ ಬೇಕಾದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…