ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.
ಮೈಸೂರಿನಲ್ಲಿ ಚುನಾವಣಾ ಅಖಾಡ ರಂಗೇರಿದೆ. ಮೈಸೂರು ಚುನಾವಣಾ ಅಖಾಡಕ್ಕೆ ಬಿ.ಎಲ್ ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿ, ಮಾರ್ಮಿಕವಾಗಿ ಒಂದು ಮಾತು ಹೇಳಿ ಸುಮ್ಮನಾದರು.
ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ ಅವರೆ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿಸ್ಪರ್ಧಿಯಾಗಲಿ ಎಂದು ವ್ಯಂಗ್ಯವಾಡಿದರು.
ಈ ಹಿಂದೆ ಜಗದೀಶ್ ಶೆಟ್ಟರ್ ಮಾತನಾಡಿ, ತಮಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ ಎಂದು ನೇರ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೇ ಈವರೆಗೂ ಅನೇಕ ನಾಯಕರಿಗೆ ಬಿ.ಎಲ್ ಸಂತೋಷ್ ಬಿಜೆಪಿಯಲ್ಲಿ ಟಿಕೆಟ್ ತಪ್ಪಿಸಿ, ತಮಗೆ ಬೇಕಾದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…