ಬಜರಂಗದಳ ನಿಷೇಧಿಸಲು ನಿಮ್ಮ ಬಳಿ ಧೈರ್ಯ, ತಾಕತ್ ಇದಿಯಾ..?: ಕಾಂಗ್ರೆಸ್‌ ವಿರುದ್ಧ ಫಡ್ನವೀಸ್‌ ವಾಗ್ದಾಳಿ

May 4, 2023
8:40 PM

ಬಜರಂಗದಳ ನಿಷೇಧಕ್ಕೆ ಧೈರ್ಯ ಮಾಡುವವರಿಗೆ ಬಜರಂಗದಳದ ಶಕ್ತಿ ತೋರಿಸಲೇಬೇಕು ಎಂದು ಕಾಂಗ್ರೆಸ್‌ ವಿರುದ್ಧ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌  ಹರಿಹಾಯ್ದರು. ಟಿಳಕಚೌಕನಲ್ಲಿ ಉತ್ತರ ಕ್ಷೇತ್ರದಲ್ಲಿ ನಡೆದ ಬಿಜೆಪಿ  ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಬಗ್ಗೆ ಪ್ರಸ್ತಾಪ ಮಾಡಿದೆ. ಅಷ್ಟೇ ಅಲ್ಲದೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಹೇರುತ್ತೇವೆ ಎಂದು ಹೇಳಿದೆ. ಆದರೆ ಬಜರಂಗದಳ ನಿಷೇಧಿಸಲು ನಿಮ್ಮಪ್ಪನ ಬಳಿ ತಾಕತ್ ಇದೆಯಾ? ಯಾವನ ಅಪ್ಪನಿಗಾದರೂ ಧೈರ್ಯ ಇದೆಯಾ? ಬಜರಂಗದಳ ನಿಷೇಧಿಸಲು ನಿಮ್ಮ ಬಳಿ ಧೈರ್ಯ, ತಾಕತ್ ಇಲ್ಲ? ಬಜರಂಗದಳ ನಿಷೇಧ ಮಾಡ್ತೀವಿ ಅಂದ್ರೆ ಇದರ ಅರ್ಥ ಏನು ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಪಕ್ಷದ ನಿಯತ್ತು ಹೇಗಿದೆ ಗೊತ್ತಾ?. ರಾಮಸೇತು ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಂದಾಗ ರಾಮ ಕಾಲ್ಪನಿಕ ಎಂದು ಅಫಿಡೆವಿಟ್ ಸಲ್ಲಿಸಿದರು. ರಾಮನ ಅಸ್ತಿತ್ವ ಪ್ರಶ್ನಿಸುವ ಪಕ್ಷ ಒಂದೆಡೆ, ರಾಮಮಂದಿರ ಸ್ಥಾಪನೆ ಮಾಡುತ್ತಿರುವ ಪಕ್ಷ ಒಂದೆಡೆಯಾಗಿದೆ. ಬಜರಂಗಳ ಬ್ಯಾನ್ ಮಾಡಲು ತಾಕತ್ತಿದ್ದೇಯೇ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ‌ ಮಾಡಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಬಜರಂಗದಳ ನಿಷೇಧ ಮಾಡಲು ಆಗಲ್ಲ. ಅಂದು ರಾಮನನ್ನು ವಿರೋಧಿಸಿದವರು ಇಂದು ಹನುಮನನ್ನು ವಿರೋಧಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣ, ಬಜರಂಗಿ ನಮ್ಮ ಹಿಂದೂ ಸಂಸ್ಕೃತಿಯ ಅಸ್ಮಿತೆಯಾಗಿದೆ. ‌ರಾಮನ ಅಸ್ತಿತ್ವ ಬಗ್ಗೆ ಮಾತನಾಡುವವರಿಗೆ ಮತದಾನ ವೇಳೆ ತಕ್ಕಪಾಠ ಕಲಿಸಬೇಕು ಎಂದು ವಾಗ್ದಾಳಿ ನಡೆಸಿದರು.

ಸಭೆಯಲ್ಲಿ ಸಂಸದೆ ಮಂಗಲ ಅಂಗಡಿ, ಶಾಸಕ ಅನಿಲ್ ಬೆನಕೆ, ಶಂಕರಗೌಡ ಪಾಟೀಲ,‌ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ್‌ ಭಾಗಿಯಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror