ಬಜರಂಗದಳ ನಿಷೇಧಕ್ಕೆ ಧೈರ್ಯ ಮಾಡುವವರಿಗೆ ಬಜರಂಗದಳದ ಶಕ್ತಿ ತೋರಿಸಲೇಬೇಕು ಎಂದು ಕಾಂಗ್ರೆಸ್ ವಿರುದ್ಧ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹರಿಹಾಯ್ದರು. ಟಿಳಕಚೌಕನಲ್ಲಿ ಉತ್ತರ ಕ್ಷೇತ್ರದಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಬಗ್ಗೆ ಪ್ರಸ್ತಾಪ ಮಾಡಿದೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಹೇರುತ್ತೇವೆ ಎಂದು ಹೇಳಿದೆ. ಆದರೆ ಬಜರಂಗದಳ ನಿಷೇಧಿಸಲು ನಿಮ್ಮಪ್ಪನ ಬಳಿ ತಾಕತ್ ಇದೆಯಾ? ಯಾವನ ಅಪ್ಪನಿಗಾದರೂ ಧೈರ್ಯ ಇದೆಯಾ? ಬಜರಂಗದಳ ನಿಷೇಧಿಸಲು ನಿಮ್ಮ ಬಳಿ ಧೈರ್ಯ, ತಾಕತ್ ಇಲ್ಲ? ಬಜರಂಗದಳ ನಿಷೇಧ ಮಾಡ್ತೀವಿ ಅಂದ್ರೆ ಇದರ ಅರ್ಥ ಏನು ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷದ ನಿಯತ್ತು ಹೇಗಿದೆ ಗೊತ್ತಾ?. ರಾಮಸೇತು ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆಗೆ ಬಂದಾಗ ರಾಮ ಕಾಲ್ಪನಿಕ ಎಂದು ಅಫಿಡೆವಿಟ್ ಸಲ್ಲಿಸಿದರು. ರಾಮನ ಅಸ್ತಿತ್ವ ಪ್ರಶ್ನಿಸುವ ಪಕ್ಷ ಒಂದೆಡೆ, ರಾಮಮಂದಿರ ಸ್ಥಾಪನೆ ಮಾಡುತ್ತಿರುವ ಪಕ್ಷ ಒಂದೆಡೆಯಾಗಿದೆ. ಬಜರಂಗಳ ಬ್ಯಾನ್ ಮಾಡಲು ತಾಕತ್ತಿದ್ದೇಯೇ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಬಜರಂಗದಳ ನಿಷೇಧ ಮಾಡಲು ಆಗಲ್ಲ. ಅಂದು ರಾಮನನ್ನು ವಿರೋಧಿಸಿದವರು ಇಂದು ಹನುಮನನ್ನು ವಿರೋಧಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣ, ಬಜರಂಗಿ ನಮ್ಮ ಹಿಂದೂ ಸಂಸ್ಕೃತಿಯ ಅಸ್ಮಿತೆಯಾಗಿದೆ. ರಾಮನ ಅಸ್ತಿತ್ವ ಬಗ್ಗೆ ಮಾತನಾಡುವವರಿಗೆ ಮತದಾನ ವೇಳೆ ತಕ್ಕಪಾಠ ಕಲಿಸಬೇಕು ಎಂದು ವಾಗ್ದಾಳಿ ನಡೆಸಿದರು.
ಸಭೆಯಲ್ಲಿ ಸಂಸದೆ ಮಂಗಲ ಅಂಗಡಿ, ಶಾಸಕ ಅನಿಲ್ ಬೆನಕೆ, ಶಂಕರಗೌಡ ಪಾಟೀಲ,ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ್ ಭಾಗಿಯಾಗಿದ್ದರು.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…