Advertisement
ಸುದ್ದಿಗಳು

ಬಜರಂಗದಳ ನಿಷೇಧಿಸಲು ನಿಮ್ಮ ಬಳಿ ಧೈರ್ಯ, ತಾಕತ್ ಇದಿಯಾ..?: ಕಾಂಗ್ರೆಸ್‌ ವಿರುದ್ಧ ಫಡ್ನವೀಸ್‌ ವಾಗ್ದಾಳಿ

Share

ಬಜರಂಗದಳ ನಿಷೇಧಕ್ಕೆ ಧೈರ್ಯ ಮಾಡುವವರಿಗೆ ಬಜರಂಗದಳದ ಶಕ್ತಿ ತೋರಿಸಲೇಬೇಕು ಎಂದು ಕಾಂಗ್ರೆಸ್‌ ವಿರುದ್ಧ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌  ಹರಿಹಾಯ್ದರು. ಟಿಳಕಚೌಕನಲ್ಲಿ ಉತ್ತರ ಕ್ಷೇತ್ರದಲ್ಲಿ ನಡೆದ ಬಿಜೆಪಿ  ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಬಗ್ಗೆ ಪ್ರಸ್ತಾಪ ಮಾಡಿದೆ. ಅಷ್ಟೇ ಅಲ್ಲದೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಹೇರುತ್ತೇವೆ ಎಂದು ಹೇಳಿದೆ. ಆದರೆ ಬಜರಂಗದಳ ನಿಷೇಧಿಸಲು ನಿಮ್ಮಪ್ಪನ ಬಳಿ ತಾಕತ್ ಇದೆಯಾ? ಯಾವನ ಅಪ್ಪನಿಗಾದರೂ ಧೈರ್ಯ ಇದೆಯಾ? ಬಜರಂಗದಳ ನಿಷೇಧಿಸಲು ನಿಮ್ಮ ಬಳಿ ಧೈರ್ಯ, ತಾಕತ್ ಇಲ್ಲ? ಬಜರಂಗದಳ ನಿಷೇಧ ಮಾಡ್ತೀವಿ ಅಂದ್ರೆ ಇದರ ಅರ್ಥ ಏನು ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಪಕ್ಷದ ನಿಯತ್ತು ಹೇಗಿದೆ ಗೊತ್ತಾ?. ರಾಮಸೇತು ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಂದಾಗ ರಾಮ ಕಾಲ್ಪನಿಕ ಎಂದು ಅಫಿಡೆವಿಟ್ ಸಲ್ಲಿಸಿದರು. ರಾಮನ ಅಸ್ತಿತ್ವ ಪ್ರಶ್ನಿಸುವ ಪಕ್ಷ ಒಂದೆಡೆ, ರಾಮಮಂದಿರ ಸ್ಥಾಪನೆ ಮಾಡುತ್ತಿರುವ ಪಕ್ಷ ಒಂದೆಡೆಯಾಗಿದೆ. ಬಜರಂಗಳ ಬ್ಯಾನ್ ಮಾಡಲು ತಾಕತ್ತಿದ್ದೇಯೇ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ‌ ಮಾಡಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಬಜರಂಗದಳ ನಿಷೇಧ ಮಾಡಲು ಆಗಲ್ಲ. ಅಂದು ರಾಮನನ್ನು ವಿರೋಧಿಸಿದವರು ಇಂದು ಹನುಮನನ್ನು ವಿರೋಧಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣ, ಬಜರಂಗಿ ನಮ್ಮ ಹಿಂದೂ ಸಂಸ್ಕೃತಿಯ ಅಸ್ಮಿತೆಯಾಗಿದೆ. ‌ರಾಮನ ಅಸ್ತಿತ್ವ ಬಗ್ಗೆ ಮಾತನಾಡುವವರಿಗೆ ಮತದಾನ ವೇಳೆ ತಕ್ಕಪಾಠ ಕಲಿಸಬೇಕು ಎಂದು ವಾಗ್ದಾಳಿ ನಡೆಸಿದರು.

ಸಭೆಯಲ್ಲಿ ಸಂಸದೆ ಮಂಗಲ ಅಂಗಡಿ, ಶಾಸಕ ಅನಿಲ್ ಬೆನಕೆ, ಶಂಕರಗೌಡ ಪಾಟೀಲ,‌ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ್‌ ಭಾಗಿಯಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

12 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

13 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

13 hours ago