ಮಹತ್ವದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಕಾರ್ಯ ಮುಕ್ತಾಯಗೊಂಡಿದ್ದು, ಇದೀಗ ರಾಜಕೀಯ ಪಕ್ಷಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಶುರುವಾಗಿದೆ.
2018ರ ಚುನಾವಣೆಯಲ್ಲಿ 72.10% ಮತದಾನ ನಡೆದಿದ್ದರೆ ಈ ಬಾರಿ 72.81% ಮತದಾನ ನಡೆದಿದೆ. ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದ್ದು ಕಾಂಗ್ರೆಸ್, ಬಿಜೆಪಿ ಮಧ್ಯೆ ಜಿದ್ದಾಜಿದ್ದಿ ನಡೆಯುತ್ತಿದೆ. ಎಕ್ಸಿಟ್ ಪೋಲ್ನ ಸಮೀಕ್ಷೆಗಳಲ್ಲಿ ಕಾಂಗ್ರೆಸ್ಗೆ ಬಹುಮತ ಸಿಕ್ಕರೆ, ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನೂ ಕೆಲವು ಸಮೀಕ್ಷೆಗಳಲ್ಲಿ ಅಂತ್ರವಾಗಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬರಬಹುದು ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ನಿಖರ ಫಲಿತಾಂಶ ನೀಡಿದ್ದ ಟುಡೇಸ್ ಚಾಣಕ್ಯ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಕಾಂಗ್ರೆಸ್ನಲ್ಲಿ ನಾಯಕರೂ ಸಹ ಲೆಕ್ಕಾಚಾರ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ಲೆಕ್ಕದಲ್ಲಿ ಕಾಂಗ್ರೆಸ್ 130+, ಬಿಜೆಪಿ 65+, ಜೆಡಿಎಸ್ 22+, ಇತರೆ 3 ಸ್ಥಾನ ಬಂದರೆ, ಡಿಕೆಶಿ ಲೆಕ್ಕಚಾರದಲ್ಲಿ ಕಾಂಗ್ರೆಸ್ 141+, ಬಿಜೆಪಿ 60+, ಜೆಡಿಎಸ್ 20+, ಇತರೆ 2+ ಸ್ಥಾನಗಳು ಬರಲಿವೆ. ಆರ್ ಎಸ್ ಎಸ್ ಆಂತರಿಕ ಸಮೀಕ್ಷೆ ಪ್ರಕಾರವೂ ಬಿಜೆಪಿಗೆ ಹಿನ್ನಡೆ ಇದೆ. ಈ ಪ್ರಕಾರ ಬಿಜೆಪಿಯು 100 ಸ್ಥಾನ ದಾಟುವುದಿಲ್ಲ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…