ಮಹತ್ವದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಕಾರ್ಯ ಮುಕ್ತಾಯಗೊಂಡಿದ್ದು, ಇದೀಗ ರಾಜಕೀಯ ಪಕ್ಷಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಶುರುವಾಗಿದೆ.
2018ರ ಚುನಾವಣೆಯಲ್ಲಿ 72.10% ಮತದಾನ ನಡೆದಿದ್ದರೆ ಈ ಬಾರಿ 72.81% ಮತದಾನ ನಡೆದಿದೆ. ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದ್ದು ಕಾಂಗ್ರೆಸ್, ಬಿಜೆಪಿ ಮಧ್ಯೆ ಜಿದ್ದಾಜಿದ್ದಿ ನಡೆಯುತ್ತಿದೆ. ಎಕ್ಸಿಟ್ ಪೋಲ್ನ ಸಮೀಕ್ಷೆಗಳಲ್ಲಿ ಕಾಂಗ್ರೆಸ್ಗೆ ಬಹುಮತ ಸಿಕ್ಕರೆ, ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನೂ ಕೆಲವು ಸಮೀಕ್ಷೆಗಳಲ್ಲಿ ಅಂತ್ರವಾಗಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬರಬಹುದು ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ನಿಖರ ಫಲಿತಾಂಶ ನೀಡಿದ್ದ ಟುಡೇಸ್ ಚಾಣಕ್ಯ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಕಾಂಗ್ರೆಸ್ನಲ್ಲಿ ನಾಯಕರೂ ಸಹ ಲೆಕ್ಕಾಚಾರ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ಲೆಕ್ಕದಲ್ಲಿ ಕಾಂಗ್ರೆಸ್ 130+, ಬಿಜೆಪಿ 65+, ಜೆಡಿಎಸ್ 22+, ಇತರೆ 3 ಸ್ಥಾನ ಬಂದರೆ, ಡಿಕೆಶಿ ಲೆಕ್ಕಚಾರದಲ್ಲಿ ಕಾಂಗ್ರೆಸ್ 141+, ಬಿಜೆಪಿ 60+, ಜೆಡಿಎಸ್ 20+, ಇತರೆ 2+ ಸ್ಥಾನಗಳು ಬರಲಿವೆ. ಆರ್ ಎಸ್ ಎಸ್ ಆಂತರಿಕ ಸಮೀಕ್ಷೆ ಪ್ರಕಾರವೂ ಬಿಜೆಪಿಗೆ ಹಿನ್ನಡೆ ಇದೆ. ಈ ಪ್ರಕಾರ ಬಿಜೆಪಿಯು 100 ಸ್ಥಾನ ದಾಟುವುದಿಲ್ಲ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…