ಮಹತ್ವದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಕಾರ್ಯ ಮುಕ್ತಾಯಗೊಂಡಿದ್ದು, ಇದೀಗ ರಾಜಕೀಯ ಪಕ್ಷಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಶುರುವಾಗಿದೆ.
2018ರ ಚುನಾವಣೆಯಲ್ಲಿ 72.10% ಮತದಾನ ನಡೆದಿದ್ದರೆ ಈ ಬಾರಿ 72.81% ಮತದಾನ ನಡೆದಿದೆ. ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದ್ದು ಕಾಂಗ್ರೆಸ್, ಬಿಜೆಪಿ ಮಧ್ಯೆ ಜಿದ್ದಾಜಿದ್ದಿ ನಡೆಯುತ್ತಿದೆ. ಎಕ್ಸಿಟ್ ಪೋಲ್ನ ಸಮೀಕ್ಷೆಗಳಲ್ಲಿ ಕಾಂಗ್ರೆಸ್ಗೆ ಬಹುಮತ ಸಿಕ್ಕರೆ, ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನೂ ಕೆಲವು ಸಮೀಕ್ಷೆಗಳಲ್ಲಿ ಅಂತ್ರವಾಗಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬರಬಹುದು ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ನಿಖರ ಫಲಿತಾಂಶ ನೀಡಿದ್ದ ಟುಡೇಸ್ ಚಾಣಕ್ಯ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಕಾಂಗ್ರೆಸ್ನಲ್ಲಿ ನಾಯಕರೂ ಸಹ ಲೆಕ್ಕಾಚಾರ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ಲೆಕ್ಕದಲ್ಲಿ ಕಾಂಗ್ರೆಸ್ 130+, ಬಿಜೆಪಿ 65+, ಜೆಡಿಎಸ್ 22+, ಇತರೆ 3 ಸ್ಥಾನ ಬಂದರೆ, ಡಿಕೆಶಿ ಲೆಕ್ಕಚಾರದಲ್ಲಿ ಕಾಂಗ್ರೆಸ್ 141+, ಬಿಜೆಪಿ 60+, ಜೆಡಿಎಸ್ 20+, ಇತರೆ 2+ ಸ್ಥಾನಗಳು ಬರಲಿವೆ. ಆರ್ ಎಸ್ ಎಸ್ ಆಂತರಿಕ ಸಮೀಕ್ಷೆ ಪ್ರಕಾರವೂ ಬಿಜೆಪಿಗೆ ಹಿನ್ನಡೆ ಇದೆ. ಈ ಪ್ರಕಾರ ಬಿಜೆಪಿಯು 100 ಸ್ಥಾನ ದಾಟುವುದಿಲ್ಲ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…