ಪ್ರಧಾನಿಯಾಗಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ತಿರುಗುವ ಹಾಗೆ ತಿರುಗ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ರಾಯಲಪಾಡುನಲ್ಲಿ ಮಾತನಾಡುತ್ತಾ ರಾಜ್ಯದಲ್ಲಿ ಪ್ರದಾನಿ ನರೇಂದ್ರ ಮೋದಿ ಪ್ರವಾಸ ಕುರಿತು ಪ್ರತಿಕ್ರಿಯಿಸಿ, ಮದನಪಲ್ಲಿಯಲ್ಲಿ ಬೀಡಿ ಮಾರಾಟ ಮಾಡಲು ತಿರುಗುವ ಹಾಗೆ ಇವರು ತಿರುಗುತ್ತಿದ್ದಾರೆ. ಲಾಲ್ ಬಹಾದ್ದೂರ್ ಶಾಸ್ತ್ರಿ, ಇಂದಿರಾಗಾಂಧಿಯಂತಹವರೆಲ್ಲ ಪ್ರಧಾನಿ ಆಗಿದ್ದರು, ಈ ರೀತಿ ಆಡಲಿಲ್ಲ. ನಿಮ್ಮ ಸಚಿವರು ಲಂಚ ತೆಗೆದುಕೊಂಡಿದ್ದಾರೆ ಎಂದು ಗುತ್ತಿಗೆದಾರರು ಬರೆದ ಪತ್ರಕ್ಕೆ ಈ ದಿನದವರೆಗೂ ಉತ್ತರ ನೀಡಲಿಲ್ಲ ಎಂದು ಕಿಡಿಕಾರಿದರು.
7 ಕೆ.ಜಿ ಕೊಡುತ್ತಿದ್ದ ಅಕ್ಕಿಯನ್ನು 4 ಕೆ.ಜಿಗೆ ಇಳಿಸಿದರು. ಕಾಂಗ್ರೆಸ್ನ ಗುರುತಿನಿಂದ ಗೆದ್ದ ಶಾಸಕರನ್ನು ಕೋಟ್ಯಂತರ ಹಣ ಕೊಟ್ಟು ಖರೀದಿಸಿದರು. ಹೀಗೆ ಸರ್ಕಾರ ರಚಿಸಿ ಈ ರೀತಿಯಾಗಿ ಸರ್ಕಾರ ನಡೆಸುತ್ತಿದ್ದಾರೆ. ಕರ್ನಾಟಕದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ಸರ್ವನಾಶ ಮಾಡಿದೆ. ಈ ಸರ್ಕಾರಕ್ಕೆ ಮಾನವೀಯತೆ ಇಲ್ಲ, ಅರ್ಥವೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…