ಜಗದೀಶ್ ಶೆಟ್ಟರ್ರಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಜಗದೀಶ್ ಶೆಟ್ಟರ್ ನನ್ನೊಂದಿಗೆ ಯಾವುದೇ ಸಂಪರ್ಕದಲ್ಲಿ ಇಲ್ಲ. ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ. ನಮ್ಮದು ಸಣ್ಣ ಪಕ್ಷ, ದೊಡ್ಡ ನಾಯಕರ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಯ ಆಂತರಿಕ ವಿಚಾರವಾಗಿದೆ. ಅವರೊಬ್ಬ ಅನುಭವಸ್ಥ ರಾಜಕಾರಣಿ, ಜನಸಂಘದ ಕಾಲದಿಂದ ಕೆಲಸ ಮಾಡಿದವರು. ಅವರಂತವರೇ ಇವತ್ತು ಇಂತಹ ತೀರ್ಮಾನ ಮಾಡಿದ್ದಾರೆ. ನಾನು ಈ ಹಿಂದೆ ಬಿಜೆಪಿಯ ಡಿಎನ್ ಬಗ್ಗೆ ಮಾತಾಡಿದ್ದೆ. ಪ್ರಸ್ತುತ ಬಿಜೆಪಿಯಲ್ಲಿನ ಚಟುವಟಿಕೆಗಳಿಗೆ ಪೂರಕವಾಗಿದೆ ಎಂದು ವ್ಯಂಗ್ಯವಾಡಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…