ಜಗದೀಶ್ ಶೆಟ್ಟರ್ರಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಜಗದೀಶ್ ಶೆಟ್ಟರ್ ನನ್ನೊಂದಿಗೆ ಯಾವುದೇ ಸಂಪರ್ಕದಲ್ಲಿ ಇಲ್ಲ. ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ. ನಮ್ಮದು ಸಣ್ಣ ಪಕ್ಷ, ದೊಡ್ಡ ನಾಯಕರ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಯ ಆಂತರಿಕ ವಿಚಾರವಾಗಿದೆ. ಅವರೊಬ್ಬ ಅನುಭವಸ್ಥ ರಾಜಕಾರಣಿ, ಜನಸಂಘದ ಕಾಲದಿಂದ ಕೆಲಸ ಮಾಡಿದವರು. ಅವರಂತವರೇ ಇವತ್ತು ಇಂತಹ ತೀರ್ಮಾನ ಮಾಡಿದ್ದಾರೆ. ನಾನು ಈ ಹಿಂದೆ ಬಿಜೆಪಿಯ ಡಿಎನ್ ಬಗ್ಗೆ ಮಾತಾಡಿದ್ದೆ. ಪ್ರಸ್ತುತ ಬಿಜೆಪಿಯಲ್ಲಿನ ಚಟುವಟಿಕೆಗಳಿಗೆ ಪೂರಕವಾಗಿದೆ ಎಂದು ವ್ಯಂಗ್ಯವಾಡಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…