Advertisement
ಸುದ್ದಿಗಳು

ಮೋದಿ, ಅಮಿತ್ ಶಾ ಬಂದರೂ ಕನ್ನಡಿಗರು ಬಿಜೆಪಿಗೆ ಮಣೆ ಹಾಕಲ್ಲ | ನಿಖಿಲ್ ಕುಮಾರಸ್ವಾಮಿ

Share

ಈ ಬಾರಿ ರಾಜ್ಯಕ್ಕೆ ಮೋದಿ, ಅಮಿತ್ ಶಾ ಬಂದರೂ ಕನ್ನಡಿಗರು ಬಿಜೆಪಿಗೆ ಮಣೆ ಹಾಕುವುದಿಲ್ಲ. ಕರ್ನಾಟಕದಲ್ಲಿ  ಬಿಜೆಪಿಗೆ ಕನ್ನಡಿಗರು ಬಹಿಷ್ಕಾರ ಹಾಕುತ್ತಾರೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು.

ರಾಜ್ಯದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾಥ್ ಅವರಿಂದ ಸರಣಿ ರ‍್ಯಾಲಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತ ಸಂಪೂರ್ಣವಾಗಿ ನೆಲ ಕಚ್ಚಿದೆ. ರಾಜ್ಯ ಸರ್ಕಾರ ಕೇವಲ ಹಗರಣದಲ್ಲಿ ಮುಳುಗಿದೆ. 123 ಸ್ಥಾನವನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂಬ ಸಾಮರ್ಥ್ಯವನ್ನು ಬಿಜೆಪಿ ನಾಯಕರು ಕಳೆದುಕೊಂಡಿದ್ದಾರೆ. ಹೀಗಾಗಿ ಕೇಂದ್ರ ಬಿಜೆಪಿ ನಾಯಕರೇ ಪ್ರಚಾರಕ್ಕೆ ಬರುವ ಅನಿವಾರ್ಯ ಪರಿಸ್ಥಿತಿ ಸೃಷ್ಟಿಯಾಗಿದೆ. 2018-19ರಲ್ಲಿ ಮೋದಿ ಹೆಸರಿನಲ್ಲಿ ಜನರು ಮತ ನೀಡಿದ್ದರು. ಆದರೆ ಈ ಬಾರಿ ನೀಡುವುದಿಲ್ಲ. ಅದರ ಬದಲು ಬಿಜೆಪಿ ಸರ್ಕಾರವನ್ನು ಬಹಿಷ್ಕರಿಸುತ್ತಾರೆ ಎಂದು ಟೀಕಿಸಿದರು.

ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಬಿರುಸಿನ ಪ್ರಚಾರ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು, ಮುಖಂಡರು ಅತ್ಯಂತ ಉತ್ಸಾಹದಿಂದ ಯುವಕರ ಜೊತೆ ಕೈಜೋಡಿಸಿ ಶಕ್ತಿಮೀರಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಕಳೆದ 29 ವರ್ಷಗಳಿಂದ ನಿರಂತರವಾಗಿ ಕ್ಷೇತ್ರ ಹಾಗೂ ಇಡೀ ಜಿಲ್ಲೆಗೆ ಅತ್ಯಂತ ಪ್ರಾಮಾಣಿಕವಾಗಿ ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ದುಡಿದಿದ್ದಾರೆ. ಈ ದುಡಿಮೆಯನ್ನು ಗುರುತಿಸುವಂತಹ ಕೆಲಸ ಕ್ಷೇತ್ರದ ಜನರು ಮಾಡುತ್ತಾರೆ. ಒಬ್ಬ ಯುವಕನಿಗೆ ಅವಕಾಶವನ್ನು ಮಾಡಿಕೊಡುತ್ತಾರೆ ಎಂದು ನಂಬಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

6 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

11 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

12 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

22 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

22 hours ago