ಈ ಬಾರಿ ರಾಜ್ಯಕ್ಕೆ ಮೋದಿ, ಅಮಿತ್ ಶಾ ಬಂದರೂ ಕನ್ನಡಿಗರು ಬಿಜೆಪಿಗೆ ಮಣೆ ಹಾಕುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿಗೆ ಕನ್ನಡಿಗರು ಬಹಿಷ್ಕಾರ ಹಾಕುತ್ತಾರೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು.
ರಾಜ್ಯದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾಥ್ ಅವರಿಂದ ಸರಣಿ ರ್ಯಾಲಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತ ಸಂಪೂರ್ಣವಾಗಿ ನೆಲ ಕಚ್ಚಿದೆ. ರಾಜ್ಯ ಸರ್ಕಾರ ಕೇವಲ ಹಗರಣದಲ್ಲಿ ಮುಳುಗಿದೆ. 123 ಸ್ಥಾನವನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂಬ ಸಾಮರ್ಥ್ಯವನ್ನು ಬಿಜೆಪಿ ನಾಯಕರು ಕಳೆದುಕೊಂಡಿದ್ದಾರೆ. ಹೀಗಾಗಿ ಕೇಂದ್ರ ಬಿಜೆಪಿ ನಾಯಕರೇ ಪ್ರಚಾರಕ್ಕೆ ಬರುವ ಅನಿವಾರ್ಯ ಪರಿಸ್ಥಿತಿ ಸೃಷ್ಟಿಯಾಗಿದೆ. 2018-19ರಲ್ಲಿ ಮೋದಿ ಹೆಸರಿನಲ್ಲಿ ಜನರು ಮತ ನೀಡಿದ್ದರು. ಆದರೆ ಈ ಬಾರಿ ನೀಡುವುದಿಲ್ಲ. ಅದರ ಬದಲು ಬಿಜೆಪಿ ಸರ್ಕಾರವನ್ನು ಬಹಿಷ್ಕರಿಸುತ್ತಾರೆ ಎಂದು ಟೀಕಿಸಿದರು.
ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಬಿರುಸಿನ ಪ್ರಚಾರ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು, ಮುಖಂಡರು ಅತ್ಯಂತ ಉತ್ಸಾಹದಿಂದ ಯುವಕರ ಜೊತೆ ಕೈಜೋಡಿಸಿ ಶಕ್ತಿಮೀರಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಕಳೆದ 29 ವರ್ಷಗಳಿಂದ ನಿರಂತರವಾಗಿ ಕ್ಷೇತ್ರ ಹಾಗೂ ಇಡೀ ಜಿಲ್ಲೆಗೆ ಅತ್ಯಂತ ಪ್ರಾಮಾಣಿಕವಾಗಿ ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ದುಡಿದಿದ್ದಾರೆ. ಈ ದುಡಿಮೆಯನ್ನು ಗುರುತಿಸುವಂತಹ ಕೆಲಸ ಕ್ಷೇತ್ರದ ಜನರು ಮಾಡುತ್ತಾರೆ. ಒಬ್ಬ ಯುವಕನಿಗೆ ಅವಕಾಶವನ್ನು ಮಾಡಿಕೊಡುತ್ತಾರೆ ಎಂದು ನಂಬಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…