Advertisement
ಸುದ್ದಿಗಳು

ಕರ್ನಾಟಕದ ಹೆಮ್ಮೆ.. ನಂದಿನಿಯೇ ಬೆಸ್ಟ್ ಎಂದ ರಾಹುಲ್ ಗಾಂಧಿ

Share

ಚುನಾವಣೆ ಹೊತ್ತಲ್ಲಿ ಅಮುಲ್ ಮತ್ತು ನಂದಿನಿ ವಿಲೀನ ವಿವಾದ ಕಾವು ಪಡೆದಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನ ನಂದಿನಿ ಔಟ್‌ಲೆಟ್‌ನಲ್ಲಿ ನಂದಿನಿ ಐಸ್‌ಕ್ರೀಮ್ ಹಾಗೂ ಸಿಹಿಯನ್ನು ಸೇವಿಸಿ ಆನಂದಿಸಿದ್ದಾರೆ. ಅಲ್ಲದೇ ಈ ಕುರಿತು ತಮ್ಮ ಟ್ವಿಟ್ಟರ್  ಖಾತೆಯಲ್ಲಿ ಟ್ವೀಟ್ ಕೂಡಾ ಮಾಡಿದ್ದಾರೆ.

ಕೋಲಾರದಲ್ಲಿ ನಡೆದ ಜೈ ಭಾರತ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಬೆಂಗಳೂರಿನ ಜೆಪಿ ನಗರದಲ್ಲಿ ಪೌರ ಕಾರ್ಮಿಕ ಹಾಗೂ ಬೀದಿ ಬದಿ ವ್ಯಾಪಾರಿಗಳೊಂದಿಗೆ ನಗರದ ಆರ್.ವಿ ಡೆಂಟಲ್ ಕಾಲೇಜ್‌ನಲ್ಲಿ ರಾಹುಲ್ ಗಾಂಧಿ ಸಂವಾದ ಏರ್ಪಡಿಸಲಾಗಿತ್ತು. ಈ ವೇಳೆ ರಾಹುಲ್ ಗಾಂಧಿ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವೇಣುಗೋಪಾಲ್ ಅವರೊಂದಿಗೆ ನಂದಿನಿ ಐಸ್‌ಕ್ರೀಮ್ ಸವಿದು ಖುಷಿಪಟ್ಟಿದ್ದಾರೆ. ಬಳಿಕ ಡಿಕೆ ಶಿವಕುಮಾರ್ ಅವರು ಬೂತ್ ಮಾಲೀಕರಿಗೆ 1 ಸಾವಿರ ಹಣವನ್ನು ನೀಡಿದ್ದಾರೆ.

ನಂದಿನಿ-ಅಮುಲ್ ವಿವಾದ ವಿಚಾರವಾಗಿ ಟ್ವೀಟ್  ಮಾಡಿರುವ ರಾಹುಲ್ ಗಾಂಧಿ, ಕರ್ನಾಟಕದ ಹೆಮ್ಮೆ.. ನಂದಿನಿ ಅತ್ಯುತ್ತಮ ಎಂದು ಬಣ್ಣಿಸಿದ್ದಾರೆ. ಅಲ್ಲದೇ ತಾವು ಐಸ್‌ಕ್ರೀಮ್ ಸವಿಯುತ್ತಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಕೆಎಂಎಫ್ ಬ್ರ್ಯಾಂಡ್‌ ಬೆಂಬಲಿಸಿದ್ದಾರೆ.

ಐಸ್‌ಕ್ರೀಮ್ ಸವಿಯುತ್ತಿದ್ದ ವೇಳೆ ಬೂತ್ ಮಾಲೀಕರೊಂದಿಗೆ ಈ ನಂದಿನಿ ಉತ್ಪನ್ನಗಳು ಎಲ್ಲಿಂದ ಬರುತ್ತವೆ? ನೀವು ಎಷ್ಟು ವರ್ಷದಿಂದ ಈ ಕೆಲಸ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಬೂತ್ ಮಾಲೀಕ ಈ ಉತ್ಪನ್ನಗಳು ಬಳ್ಳಾರಿಯಿಂದ ಬರುತ್ತವೆ ಎಂದು ಉತ್ತರಿಸಿ ಬಳಿಕ ರಾಹುಲ್ ಗಾಂಧಿ ಅವರೊಂದಿಗೆ ಫೋಟೋವನ್ನೂ ಕ್ಲಿಕ್ಕಿಸಿಕೊಂಡಿದ್ದಾರೆ. ಸದ್ಯ ಈ ವಿಚಾರ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ.

ಅಮುಲ್ ಕುಟುಂಬ ಬೆಂಗಳೂರು ನಗರಕ್ಕೆ ಹಾಲು ಮತ್ತು ಮೊಸರಿನ ರೂಪದಲ್ಲಿ ಹೊಸ ತಾಜಾತನವನ್ನು ತರುತ್ತಿದೆ. ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್ಗಳಲ್ಲಿ ಶೀಘ್ರದಲ್ಲೇ ಲಭ್ಯವಾಗಲಿದ್ದು, ಅವುಗಳನ್ನು ನಿಮ್ಮ ಮನೆ ಬಾಗಿಲಿಗೆ ಆರ್ಡರ್ ಮಾಡಬಹುದು ಎಂದು ಅಮುಲ್ ಕನ್ನಡ ಏಪ್ರಿಲ್ 5 ರಂದು ಟ್ವೀಟ್ ಮಾಡಿತ್ತು. ಈ ಕುರಿತು ಕರ್ನಾಟಕದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ಕನ್ನಡಪರ ಸಂಘಗಳು ಈ ಕುರಿತು ಹೋರಾಟ ನಡೆಸುತ್ತಿವೆ. ಈ ಕ್ರಮವನ್ನು ಸಮರ್ಥಿಸಿಕೊಂಡ ಸರ್ಕಾರದ ವಿರುದ್ಧ ವಿಪಕ್ಷಗಳು ಹರಿಹಾಯ್ದಿದ್ದವು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 hour ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

6 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

11 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

23 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago