Advertisement
ಸುದ್ದಿಗಳು

ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್

Share

ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ  ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ.

ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?:
ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ.

ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸುತ್ತೇವೆ.

ಪೋಷಣೆ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀ ಅನ್ನ- ಸಿರಿ ಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.

ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.

ರಾಜ್ಯದಾದ್ಯಂತ ನಿವೇಶನ ರಹಿತ, ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.

ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯಡಿ ಎಸ್‍ಸಿ, ಎಸ್‍ಟಿ ಸಮುದಾಯದ ಮಹಿಳೆಯರು 5 ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡುತ್ತೇವೆ.

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.

ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.

ಸಮನ್ವಯ ಯೋಜನೆ ಇದರಡಿ ತ್ವರಿತಗತಿಯಲ್ಲಿ SME ಗಳು ಮತ್ತು ITI ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.

ಐಎಎಸ್, ಕೆಎಎಸ್, ಬ್ಯಾಂಕಿಂಗ್, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.

ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‍ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.

ನಮ್ಮ ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‍ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.

ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾಜಿರ್ಂಗ್ ಸ್ಟೇಷನ್‍ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‍ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್‍ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ಇಬಿ ಸಿಟಿ ಅಭಿವೃದ್ಧಿಗೊಳಿಸುವುದು.

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ಕೆ-ಅಗ್ರಿ ಫಂಡ್ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‍ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್‍ಗಳನ್ನು ಸ್ಥಾಪಿಸುತ್ತೇವೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಅರವಿಂದ್ ಲಿಂಬಾವಳಿ, ಶೋಭಾರಂದ್ಲಾಜೆ, ಧಮೇರ್‍ಂದ್ರ ಪ್ರಧಾನ್ ಇತರರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

20 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

20 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

21 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago