Advertisement
ಸುದ್ದಿಗಳು

ಮೈಸೂರಿನಲ್ಲಿ ಮೋದಿ ಮೇನಿಯಾ – 4 ಕಿ.ಮೀ. ಭರ್ಜರಿ ರೋಡ್‍ ಶೋ : ತುಂಬಿದ ಜನಸಾಗರ

Share

ಕರ್ನಾಟಕದಲ್ಲಿ ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಅಂತ ಪ್ರಧಾನಿ ಮೋದಿ ಪಟ್ಟ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ  ಸುಮಾರು 4 ಕಿ.ಮೀವರೆಗೆ ಮೋದಿ ರೋಡ್ ಶೋ ನಡೆಸಿದರು.

ಮತದಾನಕ್ಕೆ ಇನ್ನು 10 ದಿನ ಬಾಕಿ ಇದ್ದು ರೋಡ್‍ಶೋ, ರ‍್ಯಾಲಿಗಳನ್ನು ತೀವ್ರಗೊಳಿಸಿದ್ದಾರೆ. 2ನೇ ದಿನವಾದ ಇವತ್ತು ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರಿನಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಮಾವೇಶದ ಬಳಿಕ ಮೈಸೂರಿನ ಓವೆಲ್ ಮೈದಾನದಲ್ಲಿ ಇಳಿದ ಮೋದಿ ಬಳಿಕ ರೋಡ್ ಶೋ ನಡೆಸಿದರು.

Advertisement

ನಿನ್ನೆ ಬೆಂಗಳೂರಿನಲ್ಲಿ ನಡೆಸಿದಂತೆ ಅರಮನೆ ನಗರಿ ಮೈಸೂರಿನಲ್ಲಿ ಇವತ್ತು ಸುಮಾರು 4 ಕಿ.ಮೀ. ರೋಡ್ ಶೋ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ ಅವರು ಕೇಸರಿ ಶಾಲು ಧರಿಸಿ ಗಮನ ಸೆಳೆದರು. ರೋಡ್ ಶೋದ ರಸ್ತೆ ಇಕ್ಕೆಲೆಗಳಲ್ಲಿ ಕೇಸರಿ ಕಾರ್ಯಕರ್ತರು, ಅಭಿಮಾನಿಗಳು ಮೋದಿ ನೋಡಿ ಪುಳಕಿತರಾದರು. ದಾರಿಯುದ್ಧಕ್ಕೂ ಹೂಮಳೆ ಸುರಿಸಿದರು. ಹೂ ಹಾಕುವಾಗ ಅಭಿಮಾನಿಯೊಬ್ಬನ ಮೊಬೈಲ್ ಅಚಾನಕ್ ತೂರಿ ಬಂದ ಘಟನೆಯೂ ನಡೆಯಿತು. ಮೊಬೈಲ್ ಪ್ರಚಾರ ವಾಹನದ ಮೇಲ್ಗಡೆ ಬಿತ್ತು.

ಗನ್‍ಹೌಸ್ ಸರ್ಕಲ್‍ನಿಂದ ಆರಂಭವಾದ ಪವರ್ ಶೋ, ಕಾಪೋರೇಷನ್ ಸರ್ಕಲ್, ಸಿಟಿ ಬಸ್ ನಿಲ್ದಾಣ, ಕೆ.ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದ ಸರ್ಕಲ್, ಮಿಲೀನಿಯಂ ಸರ್ಕಲ್‍ನಲ್ಲಿ ಸಾಗಿ ಅಂತ್ಯವಾಯಿತು. ಮೋದಿ ಜೊತೆ ಈಶ್ವರಪ್ಪ, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ರಾಮದಾಸ್ ಇದ್ದರು. ಈ ರೋಡ್ ಶೋ ಮೂಲಕ, ಸಿದ್ದರಾಮಯ್ಯ ಸೇರಿದಂತೆ 3 ಜಿಲ್ಲೆಗಳಿಗೆ ಮೋದಿ ಸಂದೇಶ ರವಾನಿಸಿದರು. ನಾಳೆ ಮೋದಿ ಪ್ರಚಾರಕ್ಕೆ ವಿರಾಮ ಇದ್ದು, ನಾಡಿದ್ದು ಮತ್ತೆ ರಾಜ್ಯಕ್ಕೆ ಬರಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

6 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

6 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

14 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

16 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

16 hours ago