ಕರ್ನಾಟಕದಲ್ಲಿ ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಅಂತ ಪ್ರಧಾನಿ ಮೋದಿ ಪಟ್ಟ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸುಮಾರು 4 ಕಿ.ಮೀವರೆಗೆ ಮೋದಿ ರೋಡ್ ಶೋ ನಡೆಸಿದರು.
ಮತದಾನಕ್ಕೆ ಇನ್ನು 10 ದಿನ ಬಾಕಿ ಇದ್ದು ರೋಡ್ಶೋ, ರ್ಯಾಲಿಗಳನ್ನು ತೀವ್ರಗೊಳಿಸಿದ್ದಾರೆ. 2ನೇ ದಿನವಾದ ಇವತ್ತು ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರಿನಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಮಾವೇಶದ ಬಳಿಕ ಮೈಸೂರಿನ ಓವೆಲ್ ಮೈದಾನದಲ್ಲಿ ಇಳಿದ ಮೋದಿ ಬಳಿಕ ರೋಡ್ ಶೋ ನಡೆಸಿದರು.
ನಿನ್ನೆ ಬೆಂಗಳೂರಿನಲ್ಲಿ ನಡೆಸಿದಂತೆ ಅರಮನೆ ನಗರಿ ಮೈಸೂರಿನಲ್ಲಿ ಇವತ್ತು ಸುಮಾರು 4 ಕಿ.ಮೀ. ರೋಡ್ ಶೋ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ ಅವರು ಕೇಸರಿ ಶಾಲು ಧರಿಸಿ ಗಮನ ಸೆಳೆದರು. ರೋಡ್ ಶೋದ ರಸ್ತೆ ಇಕ್ಕೆಲೆಗಳಲ್ಲಿ ಕೇಸರಿ ಕಾರ್ಯಕರ್ತರು, ಅಭಿಮಾನಿಗಳು ಮೋದಿ ನೋಡಿ ಪುಳಕಿತರಾದರು. ದಾರಿಯುದ್ಧಕ್ಕೂ ಹೂಮಳೆ ಸುರಿಸಿದರು. ಹೂ ಹಾಕುವಾಗ ಅಭಿಮಾನಿಯೊಬ್ಬನ ಮೊಬೈಲ್ ಅಚಾನಕ್ ತೂರಿ ಬಂದ ಘಟನೆಯೂ ನಡೆಯಿತು. ಮೊಬೈಲ್ ಪ್ರಚಾರ ವಾಹನದ ಮೇಲ್ಗಡೆ ಬಿತ್ತು.
ಗನ್ಹೌಸ್ ಸರ್ಕಲ್ನಿಂದ ಆರಂಭವಾದ ಪವರ್ ಶೋ, ಕಾಪೋರೇಷನ್ ಸರ್ಕಲ್, ಸಿಟಿ ಬಸ್ ನಿಲ್ದಾಣ, ಕೆ.ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದ ಸರ್ಕಲ್, ಮಿಲೀನಿಯಂ ಸರ್ಕಲ್ನಲ್ಲಿ ಸಾಗಿ ಅಂತ್ಯವಾಯಿತು. ಮೋದಿ ಜೊತೆ ಈಶ್ವರಪ್ಪ, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ರಾಮದಾಸ್ ಇದ್ದರು. ಈ ರೋಡ್ ಶೋ ಮೂಲಕ, ಸಿದ್ದರಾಮಯ್ಯ ಸೇರಿದಂತೆ 3 ಜಿಲ್ಲೆಗಳಿಗೆ ಮೋದಿ ಸಂದೇಶ ರವಾನಿಸಿದರು. ನಾಳೆ ಮೋದಿ ಪ್ರಚಾರಕ್ಕೆ ವಿರಾಮ ಇದ್ದು, ನಾಡಿದ್ದು ಮತ್ತೆ ರಾಜ್ಯಕ್ಕೆ ಬರಲಿದ್ದಾರೆ.
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…