ಕರ್ನಾಟಕದಲ್ಲಿ ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಅಂತ ಪ್ರಧಾನಿ ಮೋದಿ ಪಟ್ಟ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸುಮಾರು 4 ಕಿ.ಮೀವರೆಗೆ ಮೋದಿ ರೋಡ್ ಶೋ ನಡೆಸಿದರು.
ಮತದಾನಕ್ಕೆ ಇನ್ನು 10 ದಿನ ಬಾಕಿ ಇದ್ದು ರೋಡ್ಶೋ, ರ್ಯಾಲಿಗಳನ್ನು ತೀವ್ರಗೊಳಿಸಿದ್ದಾರೆ. 2ನೇ ದಿನವಾದ ಇವತ್ತು ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರಿನಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಮಾವೇಶದ ಬಳಿಕ ಮೈಸೂರಿನ ಓವೆಲ್ ಮೈದಾನದಲ್ಲಿ ಇಳಿದ ಮೋದಿ ಬಳಿಕ ರೋಡ್ ಶೋ ನಡೆಸಿದರು.
ನಿನ್ನೆ ಬೆಂಗಳೂರಿನಲ್ಲಿ ನಡೆಸಿದಂತೆ ಅರಮನೆ ನಗರಿ ಮೈಸೂರಿನಲ್ಲಿ ಇವತ್ತು ಸುಮಾರು 4 ಕಿ.ಮೀ. ರೋಡ್ ಶೋ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ ಅವರು ಕೇಸರಿ ಶಾಲು ಧರಿಸಿ ಗಮನ ಸೆಳೆದರು. ರೋಡ್ ಶೋದ ರಸ್ತೆ ಇಕ್ಕೆಲೆಗಳಲ್ಲಿ ಕೇಸರಿ ಕಾರ್ಯಕರ್ತರು, ಅಭಿಮಾನಿಗಳು ಮೋದಿ ನೋಡಿ ಪುಳಕಿತರಾದರು. ದಾರಿಯುದ್ಧಕ್ಕೂ ಹೂಮಳೆ ಸುರಿಸಿದರು. ಹೂ ಹಾಕುವಾಗ ಅಭಿಮಾನಿಯೊಬ್ಬನ ಮೊಬೈಲ್ ಅಚಾನಕ್ ತೂರಿ ಬಂದ ಘಟನೆಯೂ ನಡೆಯಿತು. ಮೊಬೈಲ್ ಪ್ರಚಾರ ವಾಹನದ ಮೇಲ್ಗಡೆ ಬಿತ್ತು.
ಗನ್ಹೌಸ್ ಸರ್ಕಲ್ನಿಂದ ಆರಂಭವಾದ ಪವರ್ ಶೋ, ಕಾಪೋರೇಷನ್ ಸರ್ಕಲ್, ಸಿಟಿ ಬಸ್ ನಿಲ್ದಾಣ, ಕೆ.ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದ ಸರ್ಕಲ್, ಮಿಲೀನಿಯಂ ಸರ್ಕಲ್ನಲ್ಲಿ ಸಾಗಿ ಅಂತ್ಯವಾಯಿತು. ಮೋದಿ ಜೊತೆ ಈಶ್ವರಪ್ಪ, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ರಾಮದಾಸ್ ಇದ್ದರು. ಈ ರೋಡ್ ಶೋ ಮೂಲಕ, ಸಿದ್ದರಾಮಯ್ಯ ಸೇರಿದಂತೆ 3 ಜಿಲ್ಲೆಗಳಿಗೆ ಮೋದಿ ಸಂದೇಶ ರವಾನಿಸಿದರು. ನಾಳೆ ಮೋದಿ ಪ್ರಚಾರಕ್ಕೆ ವಿರಾಮ ಇದ್ದು, ನಾಡಿದ್ದು ಮತ್ತೆ ರಾಜ್ಯಕ್ಕೆ ಬರಲಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…