ಹಳೇ ಮೈಸೂರಿನ ನಾಲ್ಕು ಜಿಲ್ಲೆಗಳಲ್ಲಿ ಮೋದಿ ಇವತ್ತು ಮಿಂಚಿನ ಸಂಚಾರ ನಡೆಸಲಿದ್ದಾರೆ. ಅಮಿತ್ ಶಾ ಬಂದು ಹೋದ ಬಳಿಕ ಓಲ್ಡ್ ಮೈಸೂರಿಗೆ ಮೋದಿ ಎಂಟ್ರಿಯಾಗ್ತಿದ್ದು, ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ರೋಡ್ ಶೋ ಮಾಡಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತಬೇಟೆ ಮಾಡಲಿದ್ದಾರೆ. ಜೆಡಿಎಸ್ ಭದ್ರ ಕೋಟೆಗಳಲ್ಲಿ ನಮೋ ಭರ್ಜರಿ ಕ್ಯಾಂಪೇನ್ ಮಾಡಲಿದ್ದು, ಜೆಡಿಎಸ್ ಕೋಟೆಗಳಲ್ಲಿ ಬಿಜೆಪಿ ಮತಕೀಳಲು ಮೋದಿ ರಣತಂತ್ರ ನಡೆಸಲಿದ್ದಾರೆ.
50:50 ಇರೋ ಕ್ಷೇತ್ರಗಳಲ್ಲಿ ಮೋದಿ ಸೂತ್ರದ ಮೂಲಕ ಗೆಲ್ಲಲು ಬಿಜೆಪಿ ತಂತ್ರ ನಡೆಸಿದ್ದು, ಓಲ್ಡ್ ಮೈಸೂರಿನಲ್ಲಿ ಸದ್ಯ ಬಿಜೆಪಿ ಬಲ 11 ಕ್ಷೇತ್ರ ಮಾತ್ರ. ಈ ಸಲ ಟಾರ್ಗೆಟ್ 25 ಟಾಸ್ಕ್ ಇಟ್ಟುಕೊಂಡು ಬಿಜೆಪಿಯಿಂದ ನಾನಾ ತಂತ್ರಗಾರಿಕೆ ಪ್ರಯೋಗ ನಡೆಸಲಿದ್ದಾರಂತೆ. ಚುನಾವಣೆ ಸಮೀಪ ಬಂದಾಗ ಮೈಸೂರು ಕರ್ನಾಟಕ ಅಖಾಡಗಳಲ್ಲಿ ಮೋದಿಯೇ ಬಿಜೆಪಿ ಟ್ರೆಂಡ್ ಚೇಂಜರ್ ಮಾಡಲಿದ್ದು, ಆ ಮೂಲಕ ಹಳೇ ಮೈಸೂರಿನಲ್ಲಿ ಮೋದಿ ಪ್ರಚಾರದ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಎಂಬ ಸಂದೇಶ ರವಾನಿಸಲಿದ್ದಾರೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…