ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಾಮಪತ್ರದ ವಿರುದ್ಧ ಸಲ್ಲಿಸಿದ್ದ ಆಕ್ಷೇಪಣೆಯನ್ನು ಪರಿಶೀಲನೆ ಮಾಡಿ ಚುನಾವಣಾಧಿಕಾರಿಗಳು ನಾಮಪತ್ರವನ್ನು ಸ್ವೀಕಾರ ಮಾಡಿದ್ದಾರೆ. ಈ ಬಗ್ಗೆ ನಮ್ಮ ಬಿಜೆಪಿ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಪರ ವಕೀಲ ಎಲ್.ಎನ್ ಹೆಗ್ಗಡೆ ತಿಳಿಸಿದ್ದಾರೆ.
ರಾಮನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರ ಆದಾಯ ತೆರಿಗೆ ವಿಚಾರದಲ್ಲಿ ಸಾಕಷ್ಟು ತಪ್ಪುಗಳಿರುವುದು ಗಮನಕ್ಕೆ ಬಂದಿತ್ತು. ಅಫಿಡವಿಟ್ನಲ್ಲಿ ಕೆಲವೊಂದು ಕಡೆ ನಿಲ್ ಎಂದು ತೋರಿಸಿದ್ದಾರೆ. ಸರ್ಕಾರಕ್ಕೆ ಕಟ್ಟ ಬೇಕಾದ ತೆರಿಗೆಯನ್ನು ಕಟ್ಟದೆ ಉಳಿಸಿಕೊಂಡಿದ್ದಾರೆ. ಆದರೆ ಚುನಾವಣಾಧಿಕಾರಿಗಳು ಅದನ್ನ ಗಮನಕ್ಕೆ ತೆಗೆದುಕೊಂಡಿರಲಿಲ್ಲ. ನಾವು ಅದನ್ನು ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ. ಈ ಬಗ್ಗೆ ಆಕ್ಷೇಪಣಾ ಅರ್ಜಿಸಲ್ಲಿಸಿದ್ದೆವು ಎಂದಿದ್ದಾರೆ.
ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ಚುನಾವಣಾಧಿಕಾರಿಗಳು ಪರಿಶೀಲನೆ ಮಾಡಿ ನಾಮಪತ್ರ ಸ್ವೀಕಾರ ಮಾಡಿದ್ದಾರೆ. ಈ ವಿಚಾರದಲ್ಲಿ ಚುನಾವಣಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ. ಈ ಬಗ್ಗೆ ನಮ್ಮ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ
ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…
ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…
ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …
ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ ಜುಲೈ 22 ರಂದು ಮಾವಿನಹಣ್ಣಿನ…
ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/…
ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು Andrographis Paniculata. ಕಿರಾತಕಡ್ಡಿಗೆ ನೆಲಬೇವು ಎಂಬ…