Advertisement
ಸುದ್ದಿಗಳು

ಡಿಕೆಶಿ ನಾಮಪತ್ರ ಸ್ವೀಕೃತಿ – ಮುಂದಿನ ಕ್ರಮಕ್ಕೆ ಬಿಜೆಪಿ ಚಿಂತನೆ

Share

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಾಮಪತ್ರದ ವಿರುದ್ಧ ಸಲ್ಲಿಸಿದ್ದ ಆಕ್ಷೇಪಣೆಯನ್ನು ಪರಿಶೀಲನೆ ಮಾಡಿ ಚುನಾವಣಾಧಿಕಾರಿಗಳು ನಾಮಪತ್ರವನ್ನು ಸ್ವೀಕಾರ ಮಾಡಿದ್ದಾರೆ. ಈ ಬಗ್ಗೆ ನಮ್ಮ ಬಿಜೆಪಿ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಪರ ವಕೀಲ ಎಲ್.ಎನ್ ಹೆಗ್ಗಡೆ ತಿಳಿಸಿದ್ದಾರೆ.

ರಾಮನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರ ಆದಾಯ ತೆರಿಗೆ ವಿಚಾರದಲ್ಲಿ ಸಾಕಷ್ಟು ತಪ್ಪುಗಳಿರುವುದು ಗಮನಕ್ಕೆ ಬಂದಿತ್ತು. ಅಫಿಡವಿಟ್‍ನಲ್ಲಿ ಕೆಲವೊಂದು ಕಡೆ ನಿಲ್ ಎಂದು ತೋರಿಸಿದ್ದಾರೆ. ಸರ್ಕಾರಕ್ಕೆ ಕಟ್ಟ ಬೇಕಾದ ತೆರಿಗೆಯನ್ನು ಕಟ್ಟದೆ ಉಳಿಸಿಕೊಂಡಿದ್ದಾರೆ. ಆದರೆ ಚುನಾವಣಾಧಿಕಾರಿಗಳು ಅದನ್ನ ಗಮನಕ್ಕೆ ತೆಗೆದುಕೊಂಡಿರಲಿಲ್ಲ. ನಾವು ಅದನ್ನು ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ. ಈ ಬಗ್ಗೆ ಆಕ್ಷೇಪಣಾ ಅರ್ಜಿಸಲ್ಲಿಸಿದ್ದೆವು ಎಂದಿದ್ದಾರೆ.

ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ಚುನಾವಣಾಧಿಕಾರಿಗಳು ಪರಿಶೀಲನೆ ಮಾಡಿ ನಾಮಪತ್ರ ಸ್ವೀಕಾರ ಮಾಡಿದ್ದಾರೆ. ಈ ವಿಚಾರದಲ್ಲಿ ಚುನಾವಣಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ. ಈ ಬಗ್ಗೆ ನಮ್ಮ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago