ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಾಮಪತ್ರದ ವಿರುದ್ಧ ಸಲ್ಲಿಸಿದ್ದ ಆಕ್ಷೇಪಣೆಯನ್ನು ಪರಿಶೀಲನೆ ಮಾಡಿ ಚುನಾವಣಾಧಿಕಾರಿಗಳು ನಾಮಪತ್ರವನ್ನು ಸ್ವೀಕಾರ ಮಾಡಿದ್ದಾರೆ. ಈ ಬಗ್ಗೆ ನಮ್ಮ ಬಿಜೆಪಿ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಪರ ವಕೀಲ ಎಲ್.ಎನ್ ಹೆಗ್ಗಡೆ ತಿಳಿಸಿದ್ದಾರೆ.
ರಾಮನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರ ಆದಾಯ ತೆರಿಗೆ ವಿಚಾರದಲ್ಲಿ ಸಾಕಷ್ಟು ತಪ್ಪುಗಳಿರುವುದು ಗಮನಕ್ಕೆ ಬಂದಿತ್ತು. ಅಫಿಡವಿಟ್ನಲ್ಲಿ ಕೆಲವೊಂದು ಕಡೆ ನಿಲ್ ಎಂದು ತೋರಿಸಿದ್ದಾರೆ. ಸರ್ಕಾರಕ್ಕೆ ಕಟ್ಟ ಬೇಕಾದ ತೆರಿಗೆಯನ್ನು ಕಟ್ಟದೆ ಉಳಿಸಿಕೊಂಡಿದ್ದಾರೆ. ಆದರೆ ಚುನಾವಣಾಧಿಕಾರಿಗಳು ಅದನ್ನ ಗಮನಕ್ಕೆ ತೆಗೆದುಕೊಂಡಿರಲಿಲ್ಲ. ನಾವು ಅದನ್ನು ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ. ಈ ಬಗ್ಗೆ ಆಕ್ಷೇಪಣಾ ಅರ್ಜಿಸಲ್ಲಿಸಿದ್ದೆವು ಎಂದಿದ್ದಾರೆ.
ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ಚುನಾವಣಾಧಿಕಾರಿಗಳು ಪರಿಶೀಲನೆ ಮಾಡಿ ನಾಮಪತ್ರ ಸ್ವೀಕಾರ ಮಾಡಿದ್ದಾರೆ. ಈ ವಿಚಾರದಲ್ಲಿ ಚುನಾವಣಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ. ಈ ಬಗ್ಗೆ ನಮ್ಮ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…