ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಾಮಪತ್ರದ ವಿರುದ್ಧ ಸಲ್ಲಿಸಿದ್ದ ಆಕ್ಷೇಪಣೆಯನ್ನು ಪರಿಶೀಲನೆ ಮಾಡಿ ಚುನಾವಣಾಧಿಕಾರಿಗಳು ನಾಮಪತ್ರವನ್ನು ಸ್ವೀಕಾರ ಮಾಡಿದ್ದಾರೆ. ಈ ಬಗ್ಗೆ ನಮ್ಮ ಬಿಜೆಪಿ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಪರ ವಕೀಲ ಎಲ್.ಎನ್ ಹೆಗ್ಗಡೆ ತಿಳಿಸಿದ್ದಾರೆ.
ರಾಮನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರ ಆದಾಯ ತೆರಿಗೆ ವಿಚಾರದಲ್ಲಿ ಸಾಕಷ್ಟು ತಪ್ಪುಗಳಿರುವುದು ಗಮನಕ್ಕೆ ಬಂದಿತ್ತು. ಅಫಿಡವಿಟ್ನಲ್ಲಿ ಕೆಲವೊಂದು ಕಡೆ ನಿಲ್ ಎಂದು ತೋರಿಸಿದ್ದಾರೆ. ಸರ್ಕಾರಕ್ಕೆ ಕಟ್ಟ ಬೇಕಾದ ತೆರಿಗೆಯನ್ನು ಕಟ್ಟದೆ ಉಳಿಸಿಕೊಂಡಿದ್ದಾರೆ. ಆದರೆ ಚುನಾವಣಾಧಿಕಾರಿಗಳು ಅದನ್ನ ಗಮನಕ್ಕೆ ತೆಗೆದುಕೊಂಡಿರಲಿಲ್ಲ. ನಾವು ಅದನ್ನು ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ. ಈ ಬಗ್ಗೆ ಆಕ್ಷೇಪಣಾ ಅರ್ಜಿಸಲ್ಲಿಸಿದ್ದೆವು ಎಂದಿದ್ದಾರೆ.
ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ಚುನಾವಣಾಧಿಕಾರಿಗಳು ಪರಿಶೀಲನೆ ಮಾಡಿ ನಾಮಪತ್ರ ಸ್ವೀಕಾರ ಮಾಡಿದ್ದಾರೆ. ಈ ವಿಚಾರದಲ್ಲಿ ಚುನಾವಣಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ. ಈ ಬಗ್ಗೆ ನಮ್ಮ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…