Advertisement
ಸುದ್ದಿಗಳು

ಖರ್ಗೆ ತವರಿನಲ್ಲಿ ಮೋದಿ ದಂಡಯಾತ್ರೆ – 25 ಕ್ಷೇತ್ರದ ಮೇಲೆ ಬಿಜೆಪಿ ಕಣ್ಣು

Share

ಚುನಾವಣೆಗೆ ಇನ್ನು ಕೇವಲ 8 ದಿನವಷ್ಟೇ ಬಾಕಿಯಿದ್ದು, ಇಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ಮೋದಿ ಎಂಟ್ರಿ ನೀಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪ್ರಭಾವ ಇರುವ ಕಲ್ಯಾಣ ಕರ್ನಾಟಕದಲ್ಲಿ ಮೋದಿ ಪ್ರಚಾರದ ಮೂಲಕ ಧೂಳೆಬ್ಬಿಸಲು ಬಿಜೆಪಿ ಪ್ಲಾನ್ ಮಾಡಿದೆ.

Advertisement
Advertisement

ಕಲಬುರಗಿ ರೋಡ್ ಶೋ ವೇಳೆ ಖರ್ಗೆಗೆ ಮತ್ತೆ ಕೌಂಟರ್ ಕೊಡಲು ಮೋದಿ ಪ್ಲಾನ್ ಮಾಡಿದ್ದು ಮತ್ತೊಮ್ಮೆ ವಿಷಸರ್ಪ ಹೇಳಿಕೆಗೆ ಮೋದಿಯಿಂದ ತಿರುಗೇಟು ನಿರೀಕ್ಷೆ ಇದೆ. ಕಲ್ಯಾಣ ಕರ್ನಾಟಕದಲ್ಲಿ ಗರಿಷ್ಠ ಕ್ಷೇತ್ರಗಳನ್ನು ವಶಕ್ಕೆ ಪಡೆಯಲು ಬಿಜೆಪಿ ಪಣ ತೊಟ್ಟಿದೆ. ಈ ಭಾಗದಲ್ಲಿ ಲಿಂಗಾಯತರ ಪ್ರಾಬಲ್ಯದ ಜತೆಗೆ ಎಸ್‌ಸಿ, ಎಸ್‌ಟಿ ಇತರೇ ಹಿಂದುಳಿದ ವರ್ಗಗಳ ಅಹಿಂದ ಮತಗಳು ನಿರ್ಣಾಯಕವಾಗಲಿದೆ.

ಇಂದು ಕಲಬುರಗಿ ಬಳಿಕ, ಮೇ 6 ರಂದು ಚಿತ್ತಾಪುರಗಳಲ್ಲಿ ಮೋದಿ ಮತಬೇಟೆ ನಡೆಸಲಿದ್ದಾರೆ. ಕಲ್ಯಾಣ ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ನ 25 ಕೋಟೆಗಳ ವಶಕ್ಕೆ ಬಿಜೆಪಿ ತಂತ್ರ ಹೂಡಿದೆ. ಹಳೇ ಮೈಸೂರು ಬಳಿಕ ಕಲ್ಯಾಣ ಕರ್ನಾಟಕವೇ ನಮೋ ಟಾರ್ಗೆಟ್ ಆಗಿದೆ. ಕಲ್ಯಾಣ ಕರ್ನಾಟಕದ ಹಿನ್ನೆಡೆಯೂ ಬಹುಮತ ತಲುಪಲು ಅಡ್ಡಿಯಾಗಿತ್ತು.ಹೀಗಾಗಿ ಕಲ್ಯಾಣ ಭಾಗದದಲ್ಲಿ ಕಾಂಗ್ರೆಸ್ ಮತ ಬುಟ್ಟಿಗೆ ಮೋದಿ ಕೈಹಾಕಿದ್ದಾರೆ.

ಪ್ರಸ್ತುತ ಕಲ್ಯಾಣ ಕರ್ನಾಟಕದಲ್ಲಿ 40 ಕ್ಷೇತ್ರಗಳಿದ್ದು ಪ್ರಸ್ತುತ 17 ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಕನಿಷ್ಟ 25 ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ.

ಎಲ್ಲಿ ಕಾರ್ಯಕ್ರಮ?
ಇಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಹೊಸಪೇಟೆ, ಸಂಜೆ 4 ಗಂಟೆಗೆ ರಾಯಚೂರಿನ ಸಿಂಧನೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಕಲಬುರಗಿಯಲ್ಲಿ ರೋಡ್‌ ಶೋ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

21 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

21 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

21 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

21 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago