Advertisement
ಸುದ್ದಿಗಳು

ಖರ್ಗೆ ತವರಿನಲ್ಲಿ ಮೋದಿ ದಂಡಯಾತ್ರೆ – 25 ಕ್ಷೇತ್ರದ ಮೇಲೆ ಬಿಜೆಪಿ ಕಣ್ಣು

Share

ಚುನಾವಣೆಗೆ ಇನ್ನು ಕೇವಲ 8 ದಿನವಷ್ಟೇ ಬಾಕಿಯಿದ್ದು, ಇಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ಮೋದಿ ಎಂಟ್ರಿ ನೀಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪ್ರಭಾವ ಇರುವ ಕಲ್ಯಾಣ ಕರ್ನಾಟಕದಲ್ಲಿ ಮೋದಿ ಪ್ರಚಾರದ ಮೂಲಕ ಧೂಳೆಬ್ಬಿಸಲು ಬಿಜೆಪಿ ಪ್ಲಾನ್ ಮಾಡಿದೆ.

ಕಲಬುರಗಿ ರೋಡ್ ಶೋ ವೇಳೆ ಖರ್ಗೆಗೆ ಮತ್ತೆ ಕೌಂಟರ್ ಕೊಡಲು ಮೋದಿ ಪ್ಲಾನ್ ಮಾಡಿದ್ದು ಮತ್ತೊಮ್ಮೆ ವಿಷಸರ್ಪ ಹೇಳಿಕೆಗೆ ಮೋದಿಯಿಂದ ತಿರುಗೇಟು ನಿರೀಕ್ಷೆ ಇದೆ. ಕಲ್ಯಾಣ ಕರ್ನಾಟಕದಲ್ಲಿ ಗರಿಷ್ಠ ಕ್ಷೇತ್ರಗಳನ್ನು ವಶಕ್ಕೆ ಪಡೆಯಲು ಬಿಜೆಪಿ ಪಣ ತೊಟ್ಟಿದೆ. ಈ ಭಾಗದಲ್ಲಿ ಲಿಂಗಾಯತರ ಪ್ರಾಬಲ್ಯದ ಜತೆಗೆ ಎಸ್‌ಸಿ, ಎಸ್‌ಟಿ ಇತರೇ ಹಿಂದುಳಿದ ವರ್ಗಗಳ ಅಹಿಂದ ಮತಗಳು ನಿರ್ಣಾಯಕವಾಗಲಿದೆ.

ಇಂದು ಕಲಬುರಗಿ ಬಳಿಕ, ಮೇ 6 ರಂದು ಚಿತ್ತಾಪುರಗಳಲ್ಲಿ ಮೋದಿ ಮತಬೇಟೆ ನಡೆಸಲಿದ್ದಾರೆ. ಕಲ್ಯಾಣ ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ನ 25 ಕೋಟೆಗಳ ವಶಕ್ಕೆ ಬಿಜೆಪಿ ತಂತ್ರ ಹೂಡಿದೆ. ಹಳೇ ಮೈಸೂರು ಬಳಿಕ ಕಲ್ಯಾಣ ಕರ್ನಾಟಕವೇ ನಮೋ ಟಾರ್ಗೆಟ್ ಆಗಿದೆ. ಕಲ್ಯಾಣ ಕರ್ನಾಟಕದ ಹಿನ್ನೆಡೆಯೂ ಬಹುಮತ ತಲುಪಲು ಅಡ್ಡಿಯಾಗಿತ್ತು.ಹೀಗಾಗಿ ಕಲ್ಯಾಣ ಭಾಗದದಲ್ಲಿ ಕಾಂಗ್ರೆಸ್ ಮತ ಬುಟ್ಟಿಗೆ ಮೋದಿ ಕೈಹಾಕಿದ್ದಾರೆ.

ಪ್ರಸ್ತುತ ಕಲ್ಯಾಣ ಕರ್ನಾಟಕದಲ್ಲಿ 40 ಕ್ಷೇತ್ರಗಳಿದ್ದು ಪ್ರಸ್ತುತ 17 ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಕನಿಷ್ಟ 25 ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ.

ಎಲ್ಲಿ ಕಾರ್ಯಕ್ರಮ?
ಇಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಹೊಸಪೇಟೆ, ಸಂಜೆ 4 ಗಂಟೆಗೆ ರಾಯಚೂರಿನ ಸಿಂಧನೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಕಲಬುರಗಿಯಲ್ಲಿ ರೋಡ್‌ ಶೋ ನಡೆಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

9 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

16 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

16 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

24 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago