ಚುನಾವಣೆಗೆ ಇನ್ನು ಕೇವಲ 8 ದಿನವಷ್ಟೇ ಬಾಕಿಯಿದ್ದು, ಇಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ಮೋದಿ ಎಂಟ್ರಿ ನೀಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪ್ರಭಾವ ಇರುವ ಕಲ್ಯಾಣ ಕರ್ನಾಟಕದಲ್ಲಿ ಮೋದಿ ಪ್ರಚಾರದ ಮೂಲಕ ಧೂಳೆಬ್ಬಿಸಲು ಬಿಜೆಪಿ ಪ್ಲಾನ್ ಮಾಡಿದೆ.
ಕಲಬುರಗಿ ರೋಡ್ ಶೋ ವೇಳೆ ಖರ್ಗೆಗೆ ಮತ್ತೆ ಕೌಂಟರ್ ಕೊಡಲು ಮೋದಿ ಪ್ಲಾನ್ ಮಾಡಿದ್ದು ಮತ್ತೊಮ್ಮೆ ವಿಷಸರ್ಪ ಹೇಳಿಕೆಗೆ ಮೋದಿಯಿಂದ ತಿರುಗೇಟು ನಿರೀಕ್ಷೆ ಇದೆ. ಕಲ್ಯಾಣ ಕರ್ನಾಟಕದಲ್ಲಿ ಗರಿಷ್ಠ ಕ್ಷೇತ್ರಗಳನ್ನು ವಶಕ್ಕೆ ಪಡೆಯಲು ಬಿಜೆಪಿ ಪಣ ತೊಟ್ಟಿದೆ. ಈ ಭಾಗದಲ್ಲಿ ಲಿಂಗಾಯತರ ಪ್ರಾಬಲ್ಯದ ಜತೆಗೆ ಎಸ್ಸಿ, ಎಸ್ಟಿ ಇತರೇ ಹಿಂದುಳಿದ ವರ್ಗಗಳ ಅಹಿಂದ ಮತಗಳು ನಿರ್ಣಾಯಕವಾಗಲಿದೆ.
ಇಂದು ಕಲಬುರಗಿ ಬಳಿಕ, ಮೇ 6 ರಂದು ಚಿತ್ತಾಪುರಗಳಲ್ಲಿ ಮೋದಿ ಮತಬೇಟೆ ನಡೆಸಲಿದ್ದಾರೆ. ಕಲ್ಯಾಣ ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ನ 25 ಕೋಟೆಗಳ ವಶಕ್ಕೆ ಬಿಜೆಪಿ ತಂತ್ರ ಹೂಡಿದೆ. ಹಳೇ ಮೈಸೂರು ಬಳಿಕ ಕಲ್ಯಾಣ ಕರ್ನಾಟಕವೇ ನಮೋ ಟಾರ್ಗೆಟ್ ಆಗಿದೆ. ಕಲ್ಯಾಣ ಕರ್ನಾಟಕದ ಹಿನ್ನೆಡೆಯೂ ಬಹುಮತ ತಲುಪಲು ಅಡ್ಡಿಯಾಗಿತ್ತು.ಹೀಗಾಗಿ ಕಲ್ಯಾಣ ಭಾಗದದಲ್ಲಿ ಕಾಂಗ್ರೆಸ್ ಮತ ಬುಟ್ಟಿಗೆ ಮೋದಿ ಕೈಹಾಕಿದ್ದಾರೆ.
ಪ್ರಸ್ತುತ ಕಲ್ಯಾಣ ಕರ್ನಾಟಕದಲ್ಲಿ 40 ಕ್ಷೇತ್ರಗಳಿದ್ದು ಪ್ರಸ್ತುತ 17 ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಕನಿಷ್ಟ 25 ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ.
ಎಲ್ಲಿ ಕಾರ್ಯಕ್ರಮ?
ಇಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಹೊಸಪೇಟೆ, ಸಂಜೆ 4 ಗಂಟೆಗೆ ರಾಯಚೂರಿನ ಸಿಂಧನೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಕಲಬುರಗಿಯಲ್ಲಿ ರೋಡ್ ಶೋ ನಡೆಯಲಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…