ಚುನಾವಣೆಗೆ ಇನ್ನು ಕೇವಲ 8 ದಿನವಷ್ಟೇ ಬಾಕಿಯಿದ್ದು, ಇಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ಮೋದಿ ಎಂಟ್ರಿ ನೀಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪ್ರಭಾವ ಇರುವ ಕಲ್ಯಾಣ ಕರ್ನಾಟಕದಲ್ಲಿ ಮೋದಿ ಪ್ರಚಾರದ ಮೂಲಕ ಧೂಳೆಬ್ಬಿಸಲು ಬಿಜೆಪಿ ಪ್ಲಾನ್ ಮಾಡಿದೆ.
ಕಲಬುರಗಿ ರೋಡ್ ಶೋ ವೇಳೆ ಖರ್ಗೆಗೆ ಮತ್ತೆ ಕೌಂಟರ್ ಕೊಡಲು ಮೋದಿ ಪ್ಲಾನ್ ಮಾಡಿದ್ದು ಮತ್ತೊಮ್ಮೆ ವಿಷಸರ್ಪ ಹೇಳಿಕೆಗೆ ಮೋದಿಯಿಂದ ತಿರುಗೇಟು ನಿರೀಕ್ಷೆ ಇದೆ. ಕಲ್ಯಾಣ ಕರ್ನಾಟಕದಲ್ಲಿ ಗರಿಷ್ಠ ಕ್ಷೇತ್ರಗಳನ್ನು ವಶಕ್ಕೆ ಪಡೆಯಲು ಬಿಜೆಪಿ ಪಣ ತೊಟ್ಟಿದೆ. ಈ ಭಾಗದಲ್ಲಿ ಲಿಂಗಾಯತರ ಪ್ರಾಬಲ್ಯದ ಜತೆಗೆ ಎಸ್ಸಿ, ಎಸ್ಟಿ ಇತರೇ ಹಿಂದುಳಿದ ವರ್ಗಗಳ ಅಹಿಂದ ಮತಗಳು ನಿರ್ಣಾಯಕವಾಗಲಿದೆ.
ಇಂದು ಕಲಬುರಗಿ ಬಳಿಕ, ಮೇ 6 ರಂದು ಚಿತ್ತಾಪುರಗಳಲ್ಲಿ ಮೋದಿ ಮತಬೇಟೆ ನಡೆಸಲಿದ್ದಾರೆ. ಕಲ್ಯಾಣ ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ನ 25 ಕೋಟೆಗಳ ವಶಕ್ಕೆ ಬಿಜೆಪಿ ತಂತ್ರ ಹೂಡಿದೆ. ಹಳೇ ಮೈಸೂರು ಬಳಿಕ ಕಲ್ಯಾಣ ಕರ್ನಾಟಕವೇ ನಮೋ ಟಾರ್ಗೆಟ್ ಆಗಿದೆ. ಕಲ್ಯಾಣ ಕರ್ನಾಟಕದ ಹಿನ್ನೆಡೆಯೂ ಬಹುಮತ ತಲುಪಲು ಅಡ್ಡಿಯಾಗಿತ್ತು.ಹೀಗಾಗಿ ಕಲ್ಯಾಣ ಭಾಗದದಲ್ಲಿ ಕಾಂಗ್ರೆಸ್ ಮತ ಬುಟ್ಟಿಗೆ ಮೋದಿ ಕೈಹಾಕಿದ್ದಾರೆ.
ಪ್ರಸ್ತುತ ಕಲ್ಯಾಣ ಕರ್ನಾಟಕದಲ್ಲಿ 40 ಕ್ಷೇತ್ರಗಳಿದ್ದು ಪ್ರಸ್ತುತ 17 ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಕನಿಷ್ಟ 25 ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ.
ಎಲ್ಲಿ ಕಾರ್ಯಕ್ರಮ?
ಇಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಹೊಸಪೇಟೆ, ಸಂಜೆ 4 ಗಂಟೆಗೆ ರಾಯಚೂರಿನ ಸಿಂಧನೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಕಲಬುರಗಿಯಲ್ಲಿ ರೋಡ್ ಶೋ ನಡೆಯಲಿದೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…