Advertisement
ಸುದ್ದಿಗಳು

ಖರ್ಗೆ ತವರಿನಲ್ಲಿ ಮೋದಿ ದಂಡಯಾತ್ರೆ – 25 ಕ್ಷೇತ್ರದ ಮೇಲೆ ಬಿಜೆಪಿ ಕಣ್ಣು

Share

ಚುನಾವಣೆಗೆ ಇನ್ನು ಕೇವಲ 8 ದಿನವಷ್ಟೇ ಬಾಕಿಯಿದ್ದು, ಇಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ಮೋದಿ ಎಂಟ್ರಿ ನೀಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪ್ರಭಾವ ಇರುವ ಕಲ್ಯಾಣ ಕರ್ನಾಟಕದಲ್ಲಿ ಮೋದಿ ಪ್ರಚಾರದ ಮೂಲಕ ಧೂಳೆಬ್ಬಿಸಲು ಬಿಜೆಪಿ ಪ್ಲಾನ್ ಮಾಡಿದೆ.

ಕಲಬುರಗಿ ರೋಡ್ ಶೋ ವೇಳೆ ಖರ್ಗೆಗೆ ಮತ್ತೆ ಕೌಂಟರ್ ಕೊಡಲು ಮೋದಿ ಪ್ಲಾನ್ ಮಾಡಿದ್ದು ಮತ್ತೊಮ್ಮೆ ವಿಷಸರ್ಪ ಹೇಳಿಕೆಗೆ ಮೋದಿಯಿಂದ ತಿರುಗೇಟು ನಿರೀಕ್ಷೆ ಇದೆ. ಕಲ್ಯಾಣ ಕರ್ನಾಟಕದಲ್ಲಿ ಗರಿಷ್ಠ ಕ್ಷೇತ್ರಗಳನ್ನು ವಶಕ್ಕೆ ಪಡೆಯಲು ಬಿಜೆಪಿ ಪಣ ತೊಟ್ಟಿದೆ. ಈ ಭಾಗದಲ್ಲಿ ಲಿಂಗಾಯತರ ಪ್ರಾಬಲ್ಯದ ಜತೆಗೆ ಎಸ್‌ಸಿ, ಎಸ್‌ಟಿ ಇತರೇ ಹಿಂದುಳಿದ ವರ್ಗಗಳ ಅಹಿಂದ ಮತಗಳು ನಿರ್ಣಾಯಕವಾಗಲಿದೆ.

ಇಂದು ಕಲಬುರಗಿ ಬಳಿಕ, ಮೇ 6 ರಂದು ಚಿತ್ತಾಪುರಗಳಲ್ಲಿ ಮೋದಿ ಮತಬೇಟೆ ನಡೆಸಲಿದ್ದಾರೆ. ಕಲ್ಯಾಣ ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ನ 25 ಕೋಟೆಗಳ ವಶಕ್ಕೆ ಬಿಜೆಪಿ ತಂತ್ರ ಹೂಡಿದೆ. ಹಳೇ ಮೈಸೂರು ಬಳಿಕ ಕಲ್ಯಾಣ ಕರ್ನಾಟಕವೇ ನಮೋ ಟಾರ್ಗೆಟ್ ಆಗಿದೆ. ಕಲ್ಯಾಣ ಕರ್ನಾಟಕದ ಹಿನ್ನೆಡೆಯೂ ಬಹುಮತ ತಲುಪಲು ಅಡ್ಡಿಯಾಗಿತ್ತು.ಹೀಗಾಗಿ ಕಲ್ಯಾಣ ಭಾಗದದಲ್ಲಿ ಕಾಂಗ್ರೆಸ್ ಮತ ಬುಟ್ಟಿಗೆ ಮೋದಿ ಕೈಹಾಕಿದ್ದಾರೆ.

ಪ್ರಸ್ತುತ ಕಲ್ಯಾಣ ಕರ್ನಾಟಕದಲ್ಲಿ 40 ಕ್ಷೇತ್ರಗಳಿದ್ದು ಪ್ರಸ್ತುತ 17 ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಕನಿಷ್ಟ 25 ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ.

ಎಲ್ಲಿ ಕಾರ್ಯಕ್ರಮ?
ಇಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಹೊಸಪೇಟೆ, ಸಂಜೆ 4 ಗಂಟೆಗೆ ರಾಯಚೂರಿನ ಸಿಂಧನೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಕಲಬುರಗಿಯಲ್ಲಿ ರೋಡ್‌ ಶೋ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

3 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

3 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

14 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

15 hours ago

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

21 hours ago