Advertisement
ಸುದ್ದಿಗಳು

ಖರ್ಗೆ ತವರಿನಲ್ಲಿ ಮೋದಿ ದಂಡಯಾತ್ರೆ – 25 ಕ್ಷೇತ್ರದ ಮೇಲೆ ಬಿಜೆಪಿ ಕಣ್ಣು

Share

ಚುನಾವಣೆಗೆ ಇನ್ನು ಕೇವಲ 8 ದಿನವಷ್ಟೇ ಬಾಕಿಯಿದ್ದು, ಇಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ಮೋದಿ ಎಂಟ್ರಿ ನೀಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪ್ರಭಾವ ಇರುವ ಕಲ್ಯಾಣ ಕರ್ನಾಟಕದಲ್ಲಿ ಮೋದಿ ಪ್ರಚಾರದ ಮೂಲಕ ಧೂಳೆಬ್ಬಿಸಲು ಬಿಜೆಪಿ ಪ್ಲಾನ್ ಮಾಡಿದೆ.

ಕಲಬುರಗಿ ರೋಡ್ ಶೋ ವೇಳೆ ಖರ್ಗೆಗೆ ಮತ್ತೆ ಕೌಂಟರ್ ಕೊಡಲು ಮೋದಿ ಪ್ಲಾನ್ ಮಾಡಿದ್ದು ಮತ್ತೊಮ್ಮೆ ವಿಷಸರ್ಪ ಹೇಳಿಕೆಗೆ ಮೋದಿಯಿಂದ ತಿರುಗೇಟು ನಿರೀಕ್ಷೆ ಇದೆ. ಕಲ್ಯಾಣ ಕರ್ನಾಟಕದಲ್ಲಿ ಗರಿಷ್ಠ ಕ್ಷೇತ್ರಗಳನ್ನು ವಶಕ್ಕೆ ಪಡೆಯಲು ಬಿಜೆಪಿ ಪಣ ತೊಟ್ಟಿದೆ. ಈ ಭಾಗದಲ್ಲಿ ಲಿಂಗಾಯತರ ಪ್ರಾಬಲ್ಯದ ಜತೆಗೆ ಎಸ್‌ಸಿ, ಎಸ್‌ಟಿ ಇತರೇ ಹಿಂದುಳಿದ ವರ್ಗಗಳ ಅಹಿಂದ ಮತಗಳು ನಿರ್ಣಾಯಕವಾಗಲಿದೆ.

Advertisement

ಇಂದು ಕಲಬುರಗಿ ಬಳಿಕ, ಮೇ 6 ರಂದು ಚಿತ್ತಾಪುರಗಳಲ್ಲಿ ಮೋದಿ ಮತಬೇಟೆ ನಡೆಸಲಿದ್ದಾರೆ. ಕಲ್ಯಾಣ ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ನ 25 ಕೋಟೆಗಳ ವಶಕ್ಕೆ ಬಿಜೆಪಿ ತಂತ್ರ ಹೂಡಿದೆ. ಹಳೇ ಮೈಸೂರು ಬಳಿಕ ಕಲ್ಯಾಣ ಕರ್ನಾಟಕವೇ ನಮೋ ಟಾರ್ಗೆಟ್ ಆಗಿದೆ. ಕಲ್ಯಾಣ ಕರ್ನಾಟಕದ ಹಿನ್ನೆಡೆಯೂ ಬಹುಮತ ತಲುಪಲು ಅಡ್ಡಿಯಾಗಿತ್ತು.ಹೀಗಾಗಿ ಕಲ್ಯಾಣ ಭಾಗದದಲ್ಲಿ ಕಾಂಗ್ರೆಸ್ ಮತ ಬುಟ್ಟಿಗೆ ಮೋದಿ ಕೈಹಾಕಿದ್ದಾರೆ.

ಪ್ರಸ್ತುತ ಕಲ್ಯಾಣ ಕರ್ನಾಟಕದಲ್ಲಿ 40 ಕ್ಷೇತ್ರಗಳಿದ್ದು ಪ್ರಸ್ತುತ 17 ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಕನಿಷ್ಟ 25 ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ.

Advertisement

ಎಲ್ಲಿ ಕಾರ್ಯಕ್ರಮ?
ಇಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಹೊಸಪೇಟೆ, ಸಂಜೆ 4 ಗಂಟೆಗೆ ರಾಯಚೂರಿನ ಸಿಂಧನೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಕಲಬುರಗಿಯಲ್ಲಿ ರೋಡ್‌ ಶೋ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

19 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

19 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 days ago